EducationKarnataka NewsLatest

*ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳೇ ಗಮನಿಸಿ: ಇಂದು ನಡೆಯಬೇಕಿದ್ದ ಪರೀಕ್ಷೆ ನಾಳೆಗೆ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ಇಂದು ನಡೆಯಬೇಕಿದ್ದ ತೃತಿಯ ಭಾಷೆಯ ಪರೀಕ್ಷೆಯನ್ನು ಮಾರ್ಚ್ 31ಕ್ಕೆ ಮುಂದೂಡಲಾಗಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ಮಹಾವೀರ ಜಯಂತಿ ಹಿನ್ನೆಲೆಯಲ್ಲಿ ಈ ಹಿಂದೆ ಘೋಷಿಸಿದ್ದ ಸಾರ್ವತ್ರಿಕ ರಜೆಯನ್ನು ಮಾರ್ಚ್ 31ರ ಬದಲಾಗಿ ಮಾರ್ಚ್ 30ಕ್ಕೆ ಸೋಮವಾರದಂದು ಬದಲಾಯಿಸಿ ಆದೇಶ ಹೊರಡಿಸಿದೆ.ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ದಿನಾಂಕವನ್ನು ಒಂದು ದಿನ ಮುಂದೂಡಾಗಿದೆ.

Home add -Advt

ಮಾರ್ಚ್ 31ರಂದು ಮಂಗಳವಾರ ತೃಟಿಯ ಭಾಷೆಯ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಸಮಯ ಹಾಗೂ ಕೇಂದ್ರದಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲಾ ವಿಷಯಗಳ ಪರೀಕ್ಷೆಗಳು ಮೊದಲು ನಿಗದಿ ಪಡಿಸಿದ ವೇಳಾಪಟ್ಟಿಯಂತೆ ನಡೆಯಲಿದೆ.

Related Articles

Back to top button