Latest

ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಈ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದು, ಜೂನ್ 21 ರಿಂದ ಆರಂಭವಾಗಬೇಕಿದ್ದ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಪೋಷಕರ, ವಿವಿಧ ಶಾಲಾ ಸಂಘಟನೆಗಳ ಹಿತದೃಷ್ಟಿಯಿಂದ ಈ ನಿರ್ಣಯ ಕೈಗೊಳ್ಳಲಾಗಿದೆ. ಪರೀಕ್ಷೆ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಬ್ಲ್ಯಾಕ್ ಫಂಗಸ್; ಇಬ್ಬರು ಬಲಿ

ನ್ಯಾಯಾಧೀಶರು ಸರ್ವಜ್ಞರಲ್ಲ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button