Kannada NewsKarnataka NewsLatest

*ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್: ತುಟ್ಟಿಭತ್ಯೆ ಹೆಚ್ಚಳ*

ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಷಡಕ್ಷರಿ

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ದೀಪಾವಳಿ ಕೊಡುಗೆ ನೀಡಿದೆ.

Home add -Advt

ಸರ್ಕಾರಿ ನೌಕರರಿಗೆ ದಿನಾಂಕ 1-7-2025ರಿಂದ ಅನ್ವಯವಾಗುವಂತೆ ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಿಸುವ ಕಡತಕ್ಕೆ ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ. ಮುಂದಿನ ಎರಡು ಮೂರು ದಿನಗಳಲ್ಲಿ ಈ ಬಗ್ಗೆ ಅಧಿಕೃತ ಆದೇಶ ಹೊರಬೀಳಲಿದೆ.

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಧನ್ಯವಾದ ತಿಳಿಸಿದ್ದಾರೆ.


Related Articles

Back to top button