Kannada NewsKarnataka NewsLatestPolitics

*ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರ ನೇಮಕ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ವಕ್ತಾರರನ್ನಾಗಿ ಐವರು ಸಚಿವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ, ಕಾರ್ಯವೈಖರಿ ಹಾಗೂ ಯೋಜನೆಗಳನ್ನು ಜನರಿಗೆ ತಿಳಿಸುವ ಹಾಗೂ ತಲುಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐವರು ಸಚಿವರನ್ನು ಸರ್ಕಾರದ ವಕ್ತಾರರನ್ನಾಗಿ ನೇಮಕ ಮಾಡಿದ್ದಾರೆ.

Home add -Advt

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಅರಣ್ಯ ಸಚಿವ ಈಶ್ವರ ಖಂಡ್ರೆ, ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ನೇಮಕ ಮಾಡಲಾಗಿದೆ.

ಈ ಐವರು ಸಚಿವರಿಗೆ ಕಾಲ ಕಲಾಕ್ಕೆ ದಾಖಲೆಗಳನ್ನು, ಮಾಹಿತಿಗಳನ್ನು ಒದಗಿಸುವಂತೆ ಎಲ್ಲಾ ಇಲಾಖೆಗಳಿಗೂ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.


Related Articles

Back to top button