Kannada NewsKarnataka NewsNationalPolitics

*ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ: 7 ಅಭಿಮಾನಿಗಳ ಸಾವು*

ಪ್ರಗತಿವಾಹಿನಿ ಸುದ್ದಿ : ಆರ್‌ಸಿಬಿ ವಿಜಯೋತ್ಸವದಲ್ಲಿ ಪಾಲ್ಗೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂನತ್ತ ಅಭಿಮಾನಿಗಳು ಎಷ್ಟೊಂದು ಪ್ರಮಾಣದಲ್ಲಿ ಬಂದರು ಎಂದರೆ, ಭೀಕರ ಕಾಲ್ತುಳಿತವೇ ಸಂಭವಿಸಿದೆ.ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ.

ಇನ್ನೂ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಅಸ್ವಸ್ಥಗೊಂಡ ಇಬ್ಬರಿಗೂ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಆರ್‌ಸಿಬಿ ಆಟಗಾಗರನ್ನು ನೋಡಲು ಬಂದಿದ್ದ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ವಿಧಾನಸೌಧದ ಮುಂದೆ ಜಮಾಯಿಸಿದ್ದಾರೆ. ಇನ್ನೂ ಇದೇ ವೇಳೆ ಅಭಿಮಾನಿಗಳೆಲ್ಲಾ ಚಿನ್ನಸ್ವಾಮಿ ಸ್ಟೇಡಿಯಂ ಏಕಾಏಕಿ ಬಂದಿದ್ದಾರೆ. ಇದೇ ಕಾರಣಕ್ಕೆ ನೂಕು ನುಗ್ಗಲು ಉಂಟಾಗಿ ಹಲವರು ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಬೌರಿಂಗ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಏಳು ಮಂದಿ ಅಭಿಮಾನಿಗಳು ಜೀವಬಿಟ್ಟಿದ್ದಾರೆ.

50ಕ್ಕೂ ಹೆಚ್ಚು ಅಭಿಮಾನಿಗಳಿಗೆ ಗಾಯಗಳಾಗಿದ್ದು, ಆ ಕೂಡಲೇ ಅವರನ್ನೆಲ್ಲಾ ಬೌರಿಂಗ್ ಆಸ್ಪತ್ರೆಗೆ ಆಂಬುಲೆನ್ಸ್‌ ಮೂಲಕ ಶಿಫ್ಟ್ ಮಾಡಲಾಗಿದೆ. ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅಸ್ವಸ್ಥರನ್ನ ಆಸ್ಪತ್ರೆಗೆ ಕರೆದೊಯ್ಯಲೂ ಕೂಡ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

Home add -Advt

Related Articles

Back to top button