Kannada NewsKarnataka NewsLatest

ಶಾಸಕ ಅನಿಲ ಬೆನಕೆ ಕಚೇರಿ ಮೇಲೆ ಕಲ್ಲು ತೂರಾಟ; ಆರೋಪಿ ಗುರುತು ಪತ್ತೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಶಾಸಕ ಅನಿಲ ಬೆನಕೆಯವರ ಚವ್ಹಾಟ್ ಗಲ್ಲಿ ಕಚೇರಿ ಮೇಲೆ ಭಾನುವಾರ ರಾತ್ರಿ ಕಲ್ಲು ತೂರಾಟ ನಡೆದಿದೆ. ಕಚೇರಿಯ ಕಿಟಿಕಿ ಗಾಜುಗಳು ಪುಡಿ ಪುಡಿಯಾಗಿವೆ.

ವ್ಯಕ್ತಿಯೋರ್ವ ಕುಡಿದ ಅಮಲಿನಲ್ಲಿ ಈ ದುಷ್ಕೃತ್ಯವೆಸಗಿದ್ದಾನೆ ಎನ್ನಲಾಗಿದ್ದು, ಈ ಬಗ್ಗೆ ತನಿಖೆ ನಡೆದಿದೆ.

ಸತ್ಯಪ್ಪ ನಾಯಕ ಎನ್ನುವ ವ್ಯಕ್ತಿ ರಾತ್ರಿ ಶಾಸಕರ ಕಚೇರಿ ಮೇಲೆ ಕಲ್ಲು ತೂರಾಟ ನಡೆೆಸಿದ್ದು, ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಂತ್ಯ ಸಂಸ್ಕಾರಕ್ಕೆ ಅವಕಾಶ ಕೊಡದ ಕ್ರಿಷಾ ತವರು ಮನೆಯವರು; ವಿಕೋಪಕ್ಕೆ ಹೋದ ಆತ್ಮಹತ್ಯೆ ವಿವಾದ

ರಾಜ್ಯಾದ್ಯಂತ ಪ್ರೌಢಶಾಲೆಗಳು ಆರಂಭ; ಪೊಲೀಸ್ ಬಿಗಿ ಭದ್ರತೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button