
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಅರಣ್ಯ ಇಲಾಖೆ ಸಂಚಾರಿ ದಳ ದಾಳಿ ನಡೆಸಿ 6 ಜಿಂಕೆ ಕೊಂಬುಗಳನ್ನು ವಶಪಡಿಸಿಕೊಂಡಿದ್ದು, ಆರೋಪಿ ಪರಾರಿಯಾಗಿದ್ದಾನೆ.
ಪಿಎಸ್ಐ ರೋಹಿಣಿ ಪಾಟೀಲ ನೇತೃತ್ವದಲ್ಲಿ ಸಿಬ್ಬಂದಿಗಳಾದ ಯರನಾಳ, ಭಗತ್, ಕೆ.ಡಿ.ಹಿರೇಮಠ ದಾಳಿ ನಡೆಸಿದರು. ಧಾರವಾಡದವನೆಂದು ಶಂಕಿಸಲಾಗಿರುವ ಆರೋಪಿ ತಪ್ಪಿಸಿಕೊಂಡಿದ್ದಾನೆ.
ಪ್ರಕರಣವನ್ನು ಬೆಳಗಾವಿ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದ್ದು ತನಿಖೆ ಮುಂದುವರಿದಿದೆ.