Kannada NewsKarnataka NewsLatest

*ಬಿ.ಕಾಂ ವಿದ್ಯಾರ್ಥಿನಿ ಕಿಡ್ನ್ಯಾಪ್; ಸ್ನೇಹಿತರಿಂದಲೇ ಗ್ಯಾಂಗ್ ರೇಪ್*

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯನ್ನು ಆಟೋದಲ್ಲಿ ಅಪಹರಿಸಿ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನಲ್ಲಿ ಪರೀಕ್ಷೆ ಬರೆಯುತ್ತಿದ್ದಳು. ಈ ವೇಳೆ ನಾಲ್ವರು ದುರುಳರು, ನಿನ್ನ ಅಣ್ಣ ಬಂದಿದ್ದಾನೆ, ಕರೆಯುತ್ತಿದ್ದಾನೆ ಎಂದು ಹೇಳಿ ಪರೀಕ್ಷಾ ಹಾಲ್ ನಿಂದ ವಿದ್ಯಾರ್ಥಿನಿಯನ್ನು ಹೊರಗೆ ಕರೆಸಿಕೊಂಡಿದ್ದಾರೆ. ಹೊರಗೆ ಬಂದ ವಿದ್ಯಾರ್ಥಿನಿಯನ್ನು ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿರುವ ಕಾಮುಕರು ಆಟೋದಲ್ಲಿ ಬಳ್ಳಾರಿಯಿಂದ ಕೊಪ್ಪಳಕ್ಕೆ ಕರೆದೊಯ್ದಿದ್ದಾರೆ.

ವಿದ್ಯಾರ್ಥಿನಿಗೆ ಬಲವಂತದಿಂದ ಬಿಯರ್ ಕುಡಿಸಿ ಕೊಪ್ಪಳದ ಸಣಾಪುರ ಬಳಿಯ ಅಂತರಾಳ ಕೆಫೆ ಹೋಟೆಲ್ ಗೆ ಕರೆದೊಯ್ದು ಸಾಮೂಹಿಕ ಅತ್ಯಾಚರವೆಸಗಿದ್ದಾರೆ. ವಿದ್ಯಾರ್ಥಿನಿಯ ಸ್ನೇಹಿತರೇ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.

ನವೀನ್, ಸಾಕೀಬ್, ತನು ಸೇರಿದಂತೆ ನಾಲ್ವರು ಕಾಮುಕರ ವಿರುದ್ಧ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button