Kannada NewsKarnataka NewsLatest

*ಶಾಲೆಯಲ್ಲಿ ಶೌಚಾಲಯಕ್ಕೆ ಹೋಗಿದ್ದ ವಿದ್ಯಾರ್ಥಿನಿ ಅಪಹರಣಕ್ಕೆ ದುಷ್ಕರ್ಮಿ ಯತ್ನ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಶೌಚಾಲಯಕ್ಕೆ ಹೋಗಿದ್ದ 2ನೇ ತರಗತಿ ಬಾಲಕಿಯನ್ನು ಅಪಹರಿಸಲು ಯತ್ನಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ.

ವಿದ್ಯಾರ್ಥಿನಿ ಶಾಲೆಯಲ್ಲಿ ಶೌಚಾಲಯಕ್ಕೆ ತೆರಳಿದ್ದಳು. ಈ ವೇಳೆ ಅಪರಿಚಿತ ವ್ಯಕ್ತಿ ಬಾಲಕಿ ಬಾಯಿಗೆ ಬಟ್ಟೆ ತುರುಕಿ ಅಪಹರಿಸಲು ಯತ್ನಿಸಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ಜೋರಾಗಿ ಕಿರುಚಿಕೊಂಡಿದ್ದಾಳೆ. ವಿದ್ಯಾರ್ಥಿನಿಯನ್ನು ಅಲ್ಲೇ ಬಿಟ್ಟು ದುಷ್ಕರ್ಮಿ ಪರಾರಿಯಾಗಿದ್ದಾನೆ. ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅಷ್ಟರಲ್ಲಿ ಶಾಲೆಯ ಇತರ ವಿದ್ಯಾರ್ಥಿಗಳು, ಶಿಕ್ಷಕರು ಧಾವಿಸಿ ಬಂದಿದ್ದಾರೆ. ಘಟನೆ ಸಂಬಂಧ ಶಾಲೆಯ ಮುಖ್ಯಶಿಕ್ಷಕರು ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button