Kannada NewsKarnataka NewsLatest

*ವಿದ್ಯಾರ್ಥಿನಿಯ ಕತ್ತು ಸೀಳಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ*

ಪ್ರಗತಿವಾಹಿನಿ ಸುದ್ದಿ: ಪ್ರೀತಿಸಲು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ.

ಬೆಳಗುಂಬ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಭೂಮಿಕಾ ಕೊಲೆಯಾದ ದುರ್ದೈವಿ. ಶಾಲೆಯಿಂದ ಮನೆಗೆ ವಪಾಸ್ ಆಗುತ್ತಿದ್ದಾಗ ಶರತ್ ಎಂಬ ಯುವಕ ತನ್ನನ್ನು ಪ್ರೀತಿಸುವಂತೆ ದುಂಬಾಲು ಬಿದ್ದಿದ್ದ. ಇದಕ್ಕೆ ವಿದ್ಯಾಅರ್ಥಿನಿ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡ ಯುವಕ ವಿದ್ಯಾರ್ಥಿಯ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ.

Home add -Advt

ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅರಸಿಕೆರೆ ತಾಲೂಕಿನ ಖಾಸಗಿ ಕಾಲೇಜಿನಲ್ಲಿ ಯುವಕ ಪದವಿ ಓದುತ್ತಿದ್ದ. ವಿದ್ಯಾರ್ಥಿನಿಯನ್ನು ಕೊಂದು ಬಳಿಕ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆವ್ ನಡೆಸಿದ್ದಾರೆ.

Related Articles

Back to top button