Karnataka News

*ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಕಾಲೇಜು ವಿದ್ಯಾರ್ಥಿಗಳ ಪುಂಡಾಟ: ಬೈಕ್ ಸವಾರನಿಗೆ ಗುದ್ದಿ ಪರಾರಿಯಾಗಿ ಕಾಲುವೆಗೆ ಬಿದ್ದ ಕಾರು*

ಪ್ರಗತಿವಾಹಿನಿ ಸುದ್ದಿ: ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳು ಕುಡಿದ ಮತ್ತಿನಲ್ಲಿ ಕಾರು ರ್ಯಾಶ್ ಡ್ರೈವ್ ಮಡಿ ಪುಂಡಾಟ ಮೆರೆದಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್-ಚಂದಾಪುರ ಮುಖ್ಯರಸ್ತೆಯಲ್ಲಿ ನಡೆದಿದೆ.

Home add -Advt

ಕಂಠಪೂರ್ತಿ ಕುಡಿದು ಕಾರು ಚಲಾಯಿಸಿದ ವಿದ್ಯಾರ್ಥಿಗಳು ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರು ಓಡಿಸಿಕೊಂಡು ಬಂದಿದ್ದಲ್ಲದೇ ಬೈಕ್ ಸವಾರನಿಗೆ ಗುದ್ದಿ ಪರಾರಿಯಾಗಿದ್ದಾರೆ. ಹೀಗೆ ಪರಾರಿಯಾದ ವಿದ್ಯಾರ್ಥಿಗಳು ಸ್ವಲ್ಪ ದೂರ ಹೋಗಿ ಕಾರಿನ ಸಮೇತ ಮೋರಿ ಕಾಲುವೆಗೆ ಬಿದ್ದಿದಾರೆ.

ಆನೇಕಲ್ ಸೂರ್ಯಸಿಟಿ ಪೊಲೀಸ್ ಠಾಣೆ ವ್ಯಾಪಿಯಲ್ಲಿ ಈ ಘಟನೆ ನಡೆದಿದೆ. ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಾಲೇಜು ವಿದ್ಯಾರ್ಥಿಗಳ ಪುಂಡಾಟಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

Back to top button