*ಹಾಸ್ಟೇಲ್ ಕೊಠಡಿಯ ಮಂಚಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಹಾಸ್ಟೇಲ್ ಮಂಚಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಹೊರವಲಯದಲ್ಲಿ ನಡೆದಿದೆ. 17 ವರ್ಷದ ಬಿಂದುಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಚಿಕ್ಕಬಳ್ಳಾಪುರ ಮೂಲದ ಬಿಂದುಶ್ರೀ ಕೋಲಾರದ ಶ್ರೀನಿವಾಸಪುರದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಏಕಾಏಕಿ ಹಾಸ್ಟೇಲ್ ಕೊಠಡಿಯಲ್ಲಿ ತಾನು ಮಲಗುವ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Home add -Advt *ಅಳ್ನಾವರ-ಗೋವಾ ಹೆದ್ದಾರಿಯಲ್ಲಿ ಭೀಕರ … Continue reading *ಹಾಸ್ಟೇಲ್ ಕೊಠಡಿಯ ಮಂಚಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed