EducationKannada NewsLatestUncategorized

*ಬಿಂದಿ ಧರಿಸಿ ಶಾಲೆಗೆ ಬಂದಿದ್ದಕ್ಕೆ ಶಿಕ್ಷಕಿಯಿಂದ ಥಳಿತ; ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ;

ರಾಂಚಿ: ಹಣೆಗೆ ಬಿಂದಿ ಧರಿಸಿದ್ದಕ್ಕೆ ಶಿಕ್ಷಕಿ ಹೊಡೆದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾರ್ಖಂಡ್ ನ ಧನ್ ಬಾದ್ ನಲ್ಲಿ ನಡೆದಿದೆ.

Home add -Advt

ಮೃತ ವಿದ್ಯಾರ್ಥಿನಿ ಪೋಷಕರು ಶಾಲೆಯ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದು, ಆರೋಪಿ ಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶಾಲೆಗೆ ಬರುವಾಗ ವಿದ್ಯಾರ್ಥಿನಿ ಹಣೆಗೆ ಕುಂಕುಮ ಅಥವಾ ಬಿಂದಿ ಧರಿಸಿ ಬಂದಿದ್ದಾಳೆ ಎಂಬ ಕಾರಣಕ್ಕೆ ಶಿಕ್ಷಕಿ ವಿದ್ಯಾರ್ಥಿನಿಯನ್ನು ಥಳಿಸಿದ್ದರಂತೆ ಇದೇ ಕಾರಣಕ್ಕೆ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಘಟನೆ ಬೆಳಕಿಗೆ ಬಂದ ತಕ್ಷಣ ಪೊಲೀಸರು ಶಿಕ್ಷಕಿಯನ್ನು ಬಂಧಿಸಿದ್ದಾರೆ ಎಂದು ಜಾರ್ಖಂಡ್ ನ ಧನ್ ಬಾದ್ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಉತ್ತಮ್ ಮುಖರ್ಜಿ ತಿಳಿಸಿದ್ದಾರೆ.

Related Articles

Back to top button