Belagavi NewsBelgaum NewsElection NewsKannada NewsKarnataka NewsPolitics

ಏ.17 ರಂದು ನಾಮಪತ್ರ ಸಲ್ಲಿಕೆ: ಜಗದೀಶ್ ಶೆಟ್ಟರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಏ.17 ರಂದು ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲಿದ್ದೇನೆ. ಈ ಚುನಾವಣೆಯಲ್ಲಿ ಗೆದ್ದು ಮೋದಿಯವರ ಕೈ ಮತ್ತಷ್ಟು ಬಲಪಡಿಸಬೇಕಿದೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ತಿಳಿಸಿದ್ದಾರೆ.‌

ಶುಕ್ರವಾರ ಬೆಳಗ್ಗೆ ಬೆಳಗಾವಿಯ ಸದಾಶಿವ ನಗರದ ಲಕ್ಷ್ಮಿ ಕಾಂಪ್ಲೆಕ್ಷನಲ್ಲಿ ಮಾಧ್ಯಮ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದರು.

ಈಗಾಗಲೇ ಸವದತ್ತಿ, ರಾಮದುರ್ಗ, ಗೋಕಾಕ, ಅರಬಾವಿ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದೇವೆ, ಇಂದು ಬೆಳಗಾವಿ ದಕ್ಷಣದಲ್ಲಿ ಕಾರ್ಯಕ್ರಮ ಇರಲಿದೆ.‌ ನಾಳೆ ಬೆಳಗಾವಿ ಗ್ರಾಮೀಣ ಹಾಗೂ ಸವದತ್ತಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.‌

ಈ ಚುನಾವಣೆಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತೇವೆ. ಈ ಮೂಲಕ ಮೂರನೆಯ ಬಾರಿ ಮೋದಿಯವರು ಪ್ರಧಾನಿ ಆಗಬೇಕು. ಏ.17 ರಂದು ಮೆರವಣಿಗೆ ಎಲ್ಲಿಂದ ಆರಂಭ ಆಗುತ್ತದೆ ಎಂದು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ. ಕೇಂದ್ರ ನಾಯಕರನ್ನು ಕರೆಸಿ ರ್ಯಾಲಿ ನಡೆಸಲು ಚರ್ಚೆ ಮಾಡುತ್ತಿದ್ದೇವೆ ಎಂದರು. 

ಈ ವೇಳೆ ರಾಜ್ಯಸಭೆಯ ಮಾಜಿ ಸದಸ್ಯ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಬೆಳಗಾವಿ ಲೋಕಸಭಾ ಚುನಾವಣಾ ಉಸ್ತುವಾರಿ ಹನಮಂತ ನಿರಾಣಿ, ಮಹಾಪೌರರಾದ ಸವಿತಾ ಕಾಂಬಳೆ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ, ಬಿಜೆಪಿ ಮಹಾನಗರ ಜಿಲ್ಲೆಯ ಅಧ್ಯಕ್ಷೆ ಗೀತಾ ಸುತಾರ್, ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್,  ಬೆಳಗಾವಿ ಲೋಕಸಭಾ ಸಂಚಾಲಕರಾದ ಸಂಜಯ್ ಪಾಟೀಲ್, ಮಹಾನಗರ ಪ್ರಭಾರಿ ರಮೇಶ್  ದೇಶಪಾಂಡೆ, ರಾಜ್ಯಮಾಧ್ಯಮ ಸಮಿತಿ ಸದಸ್ಯ ಶರತ್ ಹೆಗಡೆ ಸೇರಿದಂತೆ ಬಿಜೆಪಿ ಪ್ರಮುಖ ಪದಾಧಿಕಾರಿಗಳು ಹಾಗೂ ನಗರ ಸೇವಕರು ಭಾಗವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button