Karnataka News
ಎಂ.ಜಿ.ಹಿರೇಮಠ ಸೇರಿ 4 ಐಎಎಸ್ ಅಧಿಕಾರಿಗಳ ಹಠಾತ್ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಡಾ. ಗೌತಮ ಬಗಾದಿ ವರ್ಗಾವಣೆಯಾಗಿದ್ದಾರೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವರ್ಗಾವಣೆ ಮಾಡಲಾಗಿದೆ.
ಪ್ರಾದೇಶಿಕ ಆಯುಕ್ತರಾಗಿದ್ದ ಎಂ.ಜಿ.ಹಿರೇಮಠ ಅವರನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ಮಂಡಳಿಗೆ ವರ್ಗಾಯಿಸಲಾಗಿದೆ.
ಧಾರವಾಡ ಜಿಲ್ಲಾ ಪಂಚಾಯತ ಸಿಇಒ ಸುರೇಶ್ ಇಟ್ನಾಳ ಅವರನ್ನು ದಾವಣಗೆರೆ ಜಿಲ್ಲಾ ಪಂಚಾಯತಕ್ಕೆ ವರ್ಗಾಯಿಸಲಾಗಿದೆ.
ಧಾರವಾಡ ಜಿಲ್ಲಾ ಪಂಚಾಯತ ಸಿಇಒ ಆಗಿ ಸ್ವರೂಪ ಟಿಕೆ ನೇಮಕಗೊಂಡಿದ್ದಾರೆ.




