ಕೊರೊನಾ ತಡೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಧನ ಸಹಾಯ ಮಾಡಿದ ಸುಧಾ ಮೂರ್ತಿ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ವೇಗವಾಗಿ ಹೆಚ್ಚುತ್ತಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಭೀರ ಪರಿಸ್ಥಿತಿ ಎದುರಾಗುತ್ತಿದೆ ಎನ್ನಲಾಗಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಿಸಲು ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕಿ ಸುಧಾ ಮೂರ್ತಿ ನೆರವಿಗೆ ಬಂದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊರೋನಾ ವೈರಸ್​​​​ ತಡೆಗೆ ಆರ್ಥಿಕವಾಗಿ ಸಹಾಯ ಮಾಡುವಂತೆ ಹಲವು ಸಂಸ್ಥೆಗಳಿಗೆ ಮನವಿ ಮಾಡಿತ್ತು. ಈ ಮನವಿಗೆ ಸ್ಪಂದಿಸಿದ ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕಿ ಸುಧಾ ಮೂರ್ತಿ, ತಮ್ಮ ಸಂಸ್ಥೆ ವತಿಯಿಂದ 28 ಲಕ್ಷ ರೂ ನೀಡಿದ್ದಾರೆ. ಕೊರೋನಾ ವೈರಸ್​​ ತಡೆಗಟ್ಟಲು ನೆರವಿಗೆ ಬಂದ ಇನ್ಫೋಸಿಸ್ ಫೌಂಡೇಶನ್​​ಗೆ ಜಿಲ್ಲಾಡಳಿತ ಧನ್ಯವಾದ ತಿಳಿಸಿದೆ.

ಇನ್ಫೋಸಿಸ್ ನೀಡಿದ 28 ಲಕ್ಷದಿಂದ ವೈದ್ಯಕೀಯ ಉಪಕರಣ ಹಾಗೂ ಚಿಕಿತ್ಸೆ ಬೇಕಾಗುವ ವಸ್ತುಗಳನ್ನು ಜಿಲ್ಲಾಡಳಿತ ಖರೀದಿ ಮಾಡಿದೆ. 1,65000 ಮಾಸ್ಕ್, 2000 ಎನ್ 95 ಮಾಸ್ಕ್, 50 ಕ್ಯಾಪ್​​ಗಳು, 500 ಮಿಲಿ ಲೀಟರ್‌ನ 5000 ಬಾಟಲ್ ಸ್ಯಾನಿಟೈಸರ್, 60 ಸ್ಪೆಷಲ್​​ ಸರ್ಜಿಕಲ್ ಗ್ಲೌಸ್, 03 ಬ್ಲಾಕ್ ಸರ್ಜಿಕಲ್ ಗ್ಲೌಸ್, 85 ಗಾಗಲ್ಸ್, 300 ಫಾಗ್ ಫ್ರೀ ಮಾಸ್ಕ್​​​​​​ಗಳನ್ನು ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button