Karnataka News
*ಇಬ್ಬರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ*

ಪ್ರಗತಿವಾಹಿನಿ ಸುದ್ದಿ: ಇಬ್ಬರು ಮಕ್ಕಳಿಗೆ ಅನ್ನದಲ್ಲಿ ವಿಷಕಲೆಸಿ ಕೊಟ್ಟು, ಬಳಿಕ ವಿಷದ ಅನ್ನವನ್ನು ತಾನೂ ಸೇವಿಸಿ ಮಹಿಳೆಯೊಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಪ್ಪಳ ಜಿಲ್ಲೆಯ ಗೊಂಡವಾಳದಲ್ಲಿ ನಡೆದಿದೆ.
ಮಾಲಾಂಭೆ ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ. ಸದ್ಯ ಮಾಲಾಂಭೆ ಚಿಕಿತ್ಸೆ ಬಳಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದೆ. ಇಬ್ಬರು ಮಕ್ಕಳಿಗೆ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

