
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಹಿರಿಯ ಐಎಎಸ್ ಅಧಿಕಾರಿ ಬಿ.ಎಂ.ವಿಜಯಶಂಕರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವಿಜಯಶಂಕರ ಐಎಂಎ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದರು. 5 ಕೋಟಿ ರೂ. ಲಂಚ ಕೇಳಿದ್ದರು. ಒಂದೂವರೆ ಕೋಟಿ ರೂ ಪಡೆದಿದ್ದರು ಎನ್ನುವ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿ, ಜೈಲಿಗೆ ಹಾಕಲಾಗಿತ್ತು. ಸೇವೆಯಿಂದ ಅಮಾನತುಗೊಂಡಿದ್ದರು. ಅವರ ಮನೆಯ ಮೇಲೆ ದಾಳಿ ನಡೆದಾಗ 2 ಕೋಟಿ ರೂ. ನಗದು ಸಿಕ್ಕಿತ್ತು.
ಈಗ ಪುನಃ ಅವರನ್ನು ವಶಕ್ಕೆ ಪಡೆಯಲು ಸಿಬಿಐ ಅನುಮತಿ ಕೇಳಿತ್ತು. ಐಎಂಎ ಹಗರಣದಲ್ಲಿ ಇವರು 18ನೇ ಆರೋಪಿಯಾಗಿದ್ದರು.
ಅವರು ಇಂದು ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಗರಣದಲ್ಲಿ ಇನ್ನೂ ಅನೇಕ ಅಧಿಕಾರಿಗಳು ಸಿಲುಕಿದ್ದಾರೆ.