Belagavi NewsBelgaum News

*ಸಿಲಿಂಡರ್ ಸ್ಫೋಟಗೊಂಡು ದಂಪತಿ ಸಾವು ಕೇಸ್: ಮೃತರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸುಳಗಾ (ಯ) ಗ್ರಾಮದಲ್ಲಿ ಸಿಲಿಂಡರ್ ಸ್ಫೊಟಗೊಂಡು ದಂಪತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾನುವಾರ ಮೃತರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

Home add -Advt

ಗ್ರಾಮದ ಕಲ್ಲಪ್ಪ ಪಾಟೀಲ್ ಮತ್ತು ಸುಮನ್ ಪಾಟೀಲ್ ಸಿಲಿಂಡರ್ ಸ್ಫೋಟದಿಂದ ಸಾವಿಗೀಡಾಗಿದ್ದಾರೆ.

ಕುಟುಂಬದವರಿಗೆ ಸಾಂತ್ವನ ಹೇಳಿದ ಸಚಿವರು, ವಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು. ಅಲ್ಲದೇ ಸರ್ಕಾರದಿಂದ ಪರಿಹಾರ ದೊರಕಿಸಿ ಕೊಡುವ ಭರವಸೆ ನೀಡಿದರು.

ಈ ಸಮಯದಲ್ಲಿ ಯುವರಾಜ ಕದಂ, ಬಾಗಣ್ಣ ನರೋಟಿ, ಯಲ್ಲಪ್ಪ ಕಲಕಾಂಬ್ಕರ್, ಮನೋಜ ಕಲಕಾಂಬ್ಕರ್, ಗಣಪತ್ ಗಡ್ಕರಿ, ಗಂಗಾರಾಂ ನರೋಟಿ ಮುಂತಾದವರು ಉಪಸ್ಥಿತರಿದ್ದರು.


Related Articles

Back to top button