Karnataka NewsLatest

ಸುಳೇಬಾವಿ ಪ್ರಿಮಿಯರ್ ಲೀಗ್ (SPL) ಕ್ರಿಕೆಟ್ ಪಂದ್ಯಾವಳಿಗಳಿಗೆ  ಚಾಲನೆ

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರತಿ ಕ್ರೀಡೆಯಲ್ಲೂ ಕ್ರೀಡಾಪಟುಗಳು ಕ್ರೀಡಾ ಪ್ರೇಮ ಮೆರೆಯುವ ಮೂಲಕ ಭಾಗವಹಿಸುವುದು ಅತ್ಯವಶ್ಯಕ. ಸೋಲು- ಗೆಲುವಿಗಿಂತ ಮುಖ್ಯವಾದುದು ಕ್ರೀಡಾ ಮನೋಭಾವ ಎಂದು  ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಹೇಳಿದರು.

ಸುಳೇಬಾವಿ ಗ್ರಾಮದಲ್ಲಿ ಹರ್ಷಾ ಶುಗರ್ಸ್ ವತಿಯಿಂದ ಆಯೋಜಿಸಲಾದ ಸುಳೇಬಾವಿ ಪ್ರಿಮಿಯರ್ ಲೀಗ್ (SPL) ಕ್ರಿಕೆಟ್ ಪಂದ್ಯಾವಳಿಗಳಿಗೆ  ಚಾಲನೆ ನೀಡಿ ಮಾತನಾಡಿದರು.

” ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿ. ಆರೋಗ್ಯವಂತರಾಗಿರಲು ಪ್ರತಿಯೊಬ್ಬರೂ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಪೋಷಕರು ತಮ್ಮ ಮಕ್ಕಳಿಗೆ ಕ್ರೀಡೆಗಳಲ್ಲಿ ಭಾಗವಹಿಸಲು ಉತ್ತೇಜನ ನೀಡಬೇಕು. ಮಕ್ಕಳಿಗೆ ಯಾವ ಕ್ರೀಡೆಯಲ್ಲಿ ಆಸಕ್ತಿ ಇದೆಯೋ ಅದರಲ್ಲಿ ಸಾಧನೆಗೆ ಪೂರಕ ಸೌಲಭ್ಯ ಒದಗಿಸಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮಹೇಶ ಸುಗ್ನೆಣ್ಣವರ, ನಿಲೇಶ್ ಚಂದಗಡ್ಕರ್, ಇಸ್ಮಾಯಿಲ್ ತಿಗಡಿ, ಬಸನಗೌಡ ಪಾಟೀಲ, ದತ್ತಾ ಬಂಡಿಗಿನಿ, ಚಂಬಣ್ಣ ಅಮೋಜಿ, ಮುಷ್ತಾಕ್ ತಿಗಡಿ ಹಾಗೂ ಕ್ರಿಕೆಟ್ ಪ್ರಿಯರು ಉಪಸ್ಥಿತರಿದ್ದರು.

*ಯುದ್ಧ ವಿಮಾನ ದುರಂತ: ಹುತಾತ್ಮ ವಿಂಗ್ ಕಮಾಂಡರ್‌ ಹನುಮಂತರಾವ್ ಸಾರಥಿಗೆ ಗಣ್ಯರ ಅಂತಿಮ‌ ನಮನ*

https://pragati.taskdun.com/iaf-plane-crashwing-commander-hanumantarao-sarathidead-bodybelagavi/

*ಆರೋಗ್ಯ ಸಚಿವರ ಮೇಲೆ ASIಯಿಂದಲೇ ಗುಂಡಿನ ದಾಳಿ*

https://pragati.taskdun.com/odish-health-minister-nabadasasishootout/

*ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ ಬಹಳ ಗಟ್ಟಿ ಹಾಗೂ ಪ್ರಬಲವಾಗಿದೆ: ಸಿಎಂ ಬೊಮ್ಮಾಯಿ*

https://pragati.taskdun.com/cm-basavaraj-bommaiamit-shahvisitkitturu-karnataka/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button