Kannada NewsKarnataka NewsLatest
ವಿಕೇಂದ್ರೀಕರಣ ವ್ಯವಸ್ಥೆಗೆ ಇನ್ನಷ್ಟು ಬಲ ನೀಡಲು ನನ್ನನ್ನು ಬೆಂಬಲಿಸಿ – ಚನ್ನರಾಜ ಹಟ್ಟಿಹೊಳಿ ಮನವಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಶನಿವಾರ ಸವದತ್ತಿ ತಾಲೂಕಿನ ವಿವಿಧ ಭಾಗಗಳಿಗೆ ತೆರಳಿ ಮತಯಾಚನೆ ಮಾಡಿದರು.

ಕಾಂಗ್ರೆಸ್ ಪಕ್ಷ ಕೇವಲ ಭರವಸೆ ನೀಡುವ ಪಕ್ಷವಲ್ಲ, ಜನಪರ, ರೈತಪರ, ಶ್ರಮಿಕರ, ಬಡವರ ಪರ ಪಕ್ಷವಾಗಿದ್ದು, ತನ್ನ ಅಧಿಕಾರದ ಅವಧಿಯಲ್ಲಿ ಸಾವಿರಾರು ಅಭಿವೃದ್ಧಿಯ ಕೆಲಸಗಳನ್ನು ಕೈಗೊಂಡು ಯಾವ ಪಕ್ಷವೂ ಮಾಡಲಾರದಂತ ಸಾಧನೆಗಳನ್ನು ಮಾಡಿದೆ. ಕಾಂಗ್ರೆಸ್ ಇತಿಹಾಸವೇ ಈ ದೇಶದ ಇತಿಹಾಸವಾಗಿದೆ. ಪಂಚಾಯಿತಿ ರಾಜ್ ವ್ಯವಸ್ಥೆ ಜಾರಿಗೆ ತಂದಿದ್ದು ಮತ್ತು ಅದನ್ನು ಸಬಲಗೊಳಿಸಿದ್ದು ಕಾಂಗ್ರೆಸ್ ಪಕ್ಷ. ಇಂತಹ ಅಗಾಧ ಇತಿಹಾಸವಿರುವ ಪಕ್ಷದಿಂದ ಸ್ಪರ್ಧಿಸಲು ನನಗೆ ಅವಕಾಶ ಸಿಕ್ಕಿದ್ದು ನನ್ನ ಸುಧೈವವಾಗಿದ್ದು, ಎಲ್ಲರೂ ಬೆಂಬಲಿಸುವ ಮೂಲಕ ನನಗೆ ಸೇವೆ ಸಲ್ಲಿಸುವ ಅವಕಾಶ ಮಾಡಿಕೊಡಬೇಕು ಎಂದು ಚನ್ನರಾಜ ಕೋರಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ವಿಶ್ವಾಸ ವೈದ್ಯ, ಆರ್ ವಿ ಪಾಟೀಲ, ಬಿ ಎನ್ ಪ್ರಭುನವರ, ಮಹರಾಜಗೌಡ ಪಾಟೀಲ, ಮಲ್ಲಿಕಾರ್ಜುನ ಕಿರಗುಡಿ, ಸುರೇಶ ಬಡಗಿಗೌಡರ, ಮಹಾಂತೇಶ ಮತ್ತಿಕೊಪ್ಪ, ಚಂದ್ರಣ್ಣ, ಪಂಚನಗೌಡ ದ್ಯಾಮನಗೌಡರ, ಬಸವರಾಜ ಗುರುವಣ್ಣವರ, ಶ್ರೀಶೈಲ ಮುತಗುಂಡ, ಡಿ ಡಿ ಟೋಪೋಜಿ, ಮಲ್ಲು ಜಕಾತಿ, ಪ್ರವೀಣ ರಾಮಪ್ಪನವರ, ಆಸಿಫ್ ಯಡ್ರಾವಿ, ಯಶವಂತ ಯಲಿಗಾರ, ಗ್ರಾಮ ಪಂಚಾಯತ್ ಗಳ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ