Kannada NewsLatestNational

*ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ; ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ವಿಚಾರಣೆ ಮುಂದೂಡಿದೆ.

ಕಾವೇರಿ ನದಿ ನೀರಿನ ಕುರಿತು ವಾಸ್ತವ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. 2 ರಾಜ್ಯಗಳು ಜಲಾಶಯಗಳ ವಾಸ್ತವ ವರದಿ ಸಲ್ಲಿಸಬೇಕು ಎಂದು ಸಿಡಬ್ಲುಎಂಎ ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

Home add -Advt

ಅಲ್ಲದೇ ಕಾವೇರಿ ನದಿ ವಿವಾದ ತನಿಖೆ ಮಾಡದೆ ತಕ್ಷಣ ಆದೇಶ ಹೊರಡಿಸುವುದು ಕಷ್ಟ. ಹೀಗಾಗಿ ವಿಚಾರಣೆಯನ್ನು ಸೆ.1ಕ್ಕೆ ಮುಂದೂಡಿದೆ.


Related Articles

Back to top button