Latest
ಅನುದಾನ ರಹಿತ ಶಾಲೆಗಳ ಶಿಕ್ಷಕರ ನೆರವಿಗೆ ಮನವಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಅಟ್ಟಹಾಸ, ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾಗಿರುವ ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೆ ನೆರವು ನೀಡುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಪದವೀಧರ ಪರಿಷತ್ ಸದಸ್ಯರು ಮನವಿ ಮಾಡಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ನೇತೃತ್ವದಲ್ಲಿ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೆ ನೆರವು ನೀಡುವ ಕುರಿತು ಮನವಿ ಸಲ್ಲಿಸಿದರು.
ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಪುಟ್ಟಣ್ಣ, ವೈ.ಎ. ನಾರಾಯಣಸ್ವಾಮಿ, ಅರುಣ ಶಹಾಪುರ ಉಪಸ್ಥಿತರಿದ್ದರು.
ಯಾಸ್ ಚಂಡಮಾರುತ; ಬಿರುಗಾಳಿ ಸಹಿತ ಭಾರಿ ಮಳೆ




