Kannada NewsKarnataka NewsLatest

ಕೇಸರಿ-ಬಿಳಿ-ಹಸಿರು ವಿದ್ಯುತ್ ‌ದೀಪಾಲಂಕಾರದಿಂದ ಝಗಮಗಿಸುತ್ತಿರುವ ಸುವರ್ಣ ವಿಧಾನಸೌಧ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ವಿದ್ಯುತ್ ‌ದೀಪಾಲಂಕಾರ ಮಾಡಲಾಗಿದ್ದು, ಕಣ್ಮನ ಸೆಳೆಯುತ್ತಿದೆ.

ಲೋಕೋಪಯೋಗಿ ಇಲಾಖೆಯಿಂದ ರಾಷ್ಟ್ರಧ್ವಜದ ರೀತಿಯಲ್ಲಿ ಕೇಸರಿ, ಬಿಳಿ, ಹಸಿರು ಬಣ್ಣದ ಲೈಟ್ ಗಳನ್ನು ಅಳವಡಿಸಲಾಗಿದೆ. ಶನಿವಾರ ಮತ್ತು ಭಾನುವಾರ ಸಾರ್ವಜನಿಕರು ಆಗಮಿಸಿ ವೀಕ್ಷಿಸಿದರು.

ಸಾರ್ವಜನಿಕರಿಗೆ ಇನ್ನೂ ಕೆಲವು ದಿನ ವೀಕ್ಷಣೆಗೆ ಅವಕಾಶ ಕಲ್ಪಿಸಬಹುದಿತ್ತು ಎನ್ನುವ ಪ್ರಸ್ತಾವನೆ ಕುರಿತು ಪ್ರಗತಿವಾಹಿನಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಕೊರೋನಾ ಇರುವ ಹಿನ್ನೆಲೆಯಲ್ಲಿ ಅದು ಸಾಧ್ಯವಾಗುತ್ತಿಲ್ಲ ಎಂದರು.

Home add -Advt

ಇಂದಿನಿಂದ ನವ ಕರ್ನಾಟಕ ನಿರ್ಮಾಣ ಆರಂಭ; ಹೊಸ ಯೋಜನೆ ಘೋಷಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button