Karnataka News

*ಅಚ್ಚರಿಯ ಬೆಳವಣಿಗೆ* *ಸರ್ಕಾರದ ವಿರುದ್ಧ ಮಠಾಧೀಶರ ದೂರು!*

ಪ್ರಗತಿವಾಹಿನಿ ಸುದ್ದಿ: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಮಠಾಧೀಶರು ಸಿಡಿದೆದ್ದಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿದ ದುರಂತ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಇನ್ನೊಂದೆಡೆ ತನಿಖೆ ಕೂಡ ಚುರುಕುಗೊಂಡಿದೆ.

ಈ ನಡುವೆ ಮಠಾಧೀಶರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆ ಬಗ್ಗೆ ದೂರು ನೀಡಲು ಮುಂದಾಗಿದ್ದಾರೆ.

ಡಾ.ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಹಲವು ಮಠಾಧೀಶರು ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಇಂದು ದೂರು ಸಲ್ಲಿಸಲು ನಿರ್ಧರಿಸಿದ್ದಾರೆ.

Home add -Advt

ಬಳಿಕ ಆರ್ ಸಿಬಿ ವಿರುದ್ಧ ಇಡಿಗೂ ದೂರು ನೀಡುವ ನಿಟ್ಟಿನಲ್ಲಿ ತೀರ್ಮಾನಿಸಿದ್ದಾರೆ.

Related Articles

Back to top button