ಕನ್ನಡ ಸುದ್ದಿ

  • Latest

    *ಲೋಕಾಯುಕ್ತ ಬಲೆಗೆ ಬಿದ್ದ ಉಡುಪಿ ಅಬಕಾರಿ ಡಿಸಿ: 8 ಕೋಟಿ 69 ಲಕ್ಷ ಮೌಲ್ಯದ ಆಸ್ತಿ ಪತ್ತೆ*

    ಪ್ರಗತಿವಾಹಿನಿ ಸುದ್ದಿ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ ಶ್ರೀನಿವಾಸ್ ಟಿ. ಎಂ. ಅವರಿಗೆ ಸಂಬಂಧಿಸಿದ 15 ವಿವಿಧ ಸ್ಥಳಗಳ…

    Read More »
  • Belagavi News

    *ಸಾಂಬ್ರಾ ಗ್ರಾಮದಲ್ಲಿ ನೂತನ ಬೀದಿ ದೀಪ ಹಾಗೂ ನಾಮಫಲಕ ಉದ್ಘಾಟನೆ*

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ರಾಮೀಣ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆಯಾಗಿ ಸಾಂಬ್ರಾ ಗ್ರಾಮದಲ್ಲಿ ನೂತನವಾಗಿ ಅಳವಡಿಸಲಾಗಿರುವ ಬೀದಿ ದೀಪಗಳು ಹಾಗೂ “ಐ ಲವ್ ಸಾಂಬ್ರಾ” ಎನ್ನುವ ನಾಮಫಲಕವನ್ನು ಮಹಿಳಾ…

    Read More »
  • Education

    *ಕಾನೂನುವ್ಯಾಸಂಗಕ್ಕೆಅಣಕುನ್ಯಾಯಾಲಯಸ್ಪರ್ಧೆಅಡಿಪಾಯ :  ಜ್ಯೋತಿ ಎಂ.*

    ಬೆಳಗಾವಿ ಆರ್.ಎಲ್.ಕಾನೂನು ಮಹಾವಿದ್ಯಾಲಯದಲ್ಲಿ ಅಣಕು ನ್ಯಾಯಾಲಯ ಸ್ಪರ್ಧೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿದ್ಯಾರ್ಥಿಗಳಿಗೆ ಅಣಕು ನ್ಯಾಯಾಲಯ ಸ್ಪರ್ಧೆ ಶೈಕ್ಷಣಿಕ ಚಟುವಟಿಕೆಗಿಂತ ಹೆಚ್ಚಿನದ್ದಾಗಿದೆ.  ಇದು ಕಾನೂನು  ಶಿಕ್ಷಣಕ್ಕೆ ಅಡಿಪಾಯವಾಗಿದೆ ಎಂದು ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಜ್ಯೋತಿ ಎಂ.ಹೇಳಿದರು. ಶುಕ್ರವಾರ ನಗರದ ಕೆಎಲ್ ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ 16 ನೇ ಎಂ.ಕೆ.ನಂಬಿಯಾರ್ ಸ್ಮಾರಕ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಅಣಕು ನ್ಯಾಯಾಲಯ ಸ್ಪರ್ಧೆ ಕೇವಲ ಕಾನೂನು ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿರದೆ ಭವಿಷ್ಯದ ಜೀವನಕ್ಕೂ ಅತ್ಯಂತ ಮಹತ್ವದಾಗಿದೆ. ವಾದವು ಚಿಕ್ಕದಾಗಿರಬೇಕು, ಸಂಕ್ಷಿಪ್ತವಾಗಿರಬೇಕು. ಕೆಲವೇ ಪದಗಳಲ್ಲಿ ಹೇಳಬೇಕು ಮತ್ತು ಸಂಕೀರ್ಣ ಸಮಸ್ಯೆಗಳನ್ನು ವ್ಯಕ್ತಪಡಿಸುವ  ಸಾಮರ್ಥ್ಯ ಇರಬೇಕು ಎಂದು ಅವರು ಸಲಹೆ ನೀಡಿದರು. ನ್ಯಾಯಾಲಯದ ಶಿಷ್ಟಾಚಾರಗಳು, ಪೀಠದ ಮೇಲಿನ ಗೌರವವೂ ಅಷ್ಟೇ ಮುಖ್ಯ ಎಂದು ಅವರು ಹೇಳಿದರು. ನ್ಯಾಯವಾದಿ ಮತ್ತು ಕೆಎಲ್ಎಸ್ ಸೊಸೈಟಿ ಕಾರ್ಯದರ್ಶಿ ಎಸ್.ವಿ.ಗಣಾಚಾರಿ ಮಾತನಾಡಿ, ಅಣಕು ನ್ಯಾಯಾಲಯ ಸ್ಪರ್ಧೆ ಕಾನೂನು ಶಿಕ್ಷಣದಲ್ಲಿ ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ. ಏಕೆಂದರೆ ಪಠ್ಯ ಪುಸ್ತಕವು ನಮಗೆ ಸೈದ್ಧಾಂತಿಕ ವಿಷಯವನ್ನು ಮಾತ್ರ ಕಲಿಸುತ್ತದೆ. ಅದರೆ, ಅಣಕು ನ್ಯಾಯಾಲಯ ಸ್ಪರ್ಧೆ ವಿದ್ಯಾರ್ಥಿಗಳಿಗೆ ಕಾನೂನು ಶಿಕ್ಷಣದ ಪ್ರಾಯೋಗಿಕ ಶಿಕ್ಷಣವನ್ನು ಅಭ್ಯಾಸ ಮಾಡಲು ವೇದಿಕೆಯನ್ನು ಒದಗಿಸುತ್ತದೆ. ಇದು ವಿದ್ಯಾರ್ಥಿಗಳು ಸಂಶೋಧನೆ, ವಕಾಲತ್ತು, ಸಾರ್ವಜನಿಕವಾಗಿ ಮಾತನಾಡುವ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಕೆಎಲ್ಎಸ್ ಸೊಸೈಟಿ ಅಧ್ಯಕ್ಷ ಪ್ರದೀಪ್ ಎಸ್. ಸಾವ್ಕರ್ ಮಾತನಾಡಿ, ವಿದ್ಯಾರ್ಥಿಯ ವೃತ್ತಿಜೀವನದಲ್ಲಿ ವಾದ ಮಂಡನೆ ಬಹಳ ಮುಖ್ಯ. ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಭಾಗವಹಿಸುವುದು, ಜತೆಗೆ ಇಂಟರ್ನ್‌ಶಿಪ್ ಕಾನೂನು ವಿದ್ಯಾರ್ಥಿಗಳಿಗೆ ದೀರ್ಘಾವಧಿಯಲ್ಲಿ ಸಹಾಯ ಮಾಡುತ್ತದೆ. ಇದು ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುತ್ತದೆ. ವಿದ್ಯಾರ್ಥಿಗಳನ್ನು ಓದಲು, ಸಂಶೋಧನೆ ಮಾಡಲು ಮತ್ತು ಕೆಲಸ ಮಾಡಲು ಪ್ರೇರಣೆ ಉಂಟುಮಾಡುತ್ತದೆ. ವಿದ್ಯಾರ್ಥಿಗಳು ನ್ಯಾಯಾಲಯದ ವಿಚಾರಣೆಗಳಿಗೆ ಹಾಜರಾಗಲು  ಉಪಯುಕ್ತವಾಗುತ್ತದೆ ಎಂದು ಹೇಳಿದರು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಮತ್ತು ನ್ಯಾಯವಾದಿ ಆರ್.ಎಸ್. ಮುತಾಲಿಕ್ ಅವರು ಕಾಲೇಜಿನ ಪರಂಪರೆ ಮತ್ತು ವಿದ್ಯಾರ್ಥಿಗಳ ಸಾಧನೆಗಳ ಬಗ್ಗೆ ವಿವರಿಸಿದರು.ಅಣಕು ನ್ಯಾಯಾಲಯ ಸ್ಪರ್ಧೆಯ ಸಂಯೋಜಕಿ ಹಾಗೂ ಪ್ರಾಧ್ಯಾಪಕಿ ಪ್ರೊ.ಅಶ್ವಿನಿ ಪರಬ್ ಅವರು ಸ್ಪರ್ಧೆಯ ನಿಯಮದ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು.  ವಿಜೇತರಿಗೆ ರೂ.50,000 ನಗದು ಮತ್ತು ಟ್ರೋಫಿ, ರನ್ನರ್ ಅಪ್ ತಂಡಕ್ಕೆ ಟ್ರೋಫಿ ಮತ್ತು ರೂ.30,000 ನಗದು ಬಹುಮಾನ, ಅತ್ಯುತ್ತಮ ಪುರುಷ ಸ್ಪರ್ಧಿಗೆ ರೂ. 15,000 ರೂಪಾಯಿ ನಗದು, ಅತ್ಯುತ್ತಮ ಮಹಿಳಾ ಸ್ಪರ್ಧಿಗೆ ರೂ.15,000 ರೂಪಾಯಿ ನಗದು, ಅತ್ಯುತ್ತಮ ಸ್ಮಾರಕ ಪ್ರಶಸ್ತಿ ಅಥವಾ ರೂ.15,000 ರೂಪಾಯಿ ನಗದು, ಮತ್ತು ಅತ್ಯುತ್ತಮ ಸಂಶೋಧಕರಿಗೆ ರೂ.10,000 ರೂಪಾಯಿ ನಗದು ಮತ್ತು ಅತ್ಯುತ್ತಮ ಸ್ಪರ್ಧಿಗೆ ಅಶೋಕ್ ಎನ್ ಪೋತದಾರ ಹೆಸರಿನ ಬೆಸ್ಟ್ ಮೂಟರ್ ಸ್ಪರ್ಧಿಗೆ ರೂ. 6,050 ನಗದು ಬಹುಮಾನ ನೀಡಲಾಗುತ್ತದೆ. ಈ ಸಮಾರಂಭವನ್ನು ಕಾಲೇಜಿನ ಮೂಟ್ ಕೋರ್ಟ್ ವಿಭಾಗ ಆಯೋಜಿಸಿತ್ತು. ಕೆಎಲ್ಎಸ್ ಸೊಸೈಟಿ ಚೇರ್ಮನ್ ಹಾಗೂ ನ್ಯಾಯವಾದಿ ಎ.ಕೆ.ಟಗಾರೆ,  ಕಾರ್ಯದರ್ಶಿ ವಿ.ಎಂ. ದೇಶಪಾಂಡೆ, ಪ್ರಾಚಾರ್ಯ ಡಾ. ಎ.ಎಚ್.ಹವಾಲ್ದಾರ್,  ಅಣಕು ನ್ಯಾಯಾಲಯ ಸ್ಪರ್ಧೆಯ ಸಂಯೋಜಕಿ ಸುನಿಧಿ ಜೋಶಿ, ಕಾಲೇಜಿನ ವಿದ್ಯಾರ್ಥಿ ಪ್ರಧಾನ ಕಾರ್ಯದರ್ಶಿ ತನ್ಮಯಿ ಸರಾಫ್ ಮತ್ತು ಮಹಿಳಾ ಪ್ರತಿನಿಧಿ ಚಂದ್ರಲೇಖಾ ಪಾಟೀಲ, ಎಲ್ಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು. Belagavi: Inauguration of the…

    Read More »
  • Politics

    *ಸುಳ್ಳು ಬರೆಯುವ ಪತ್ರಕರ್ತರಿಗಿಂತ ಸತ್ಯ ಬರೆಯುವ ಮತ್ತು ಸಂಶೋಧನೆ ನಡೆಸಿ ಬರೆಯುವ ಪತ್ರಕರ್ತರ ಸಂಖ್ಯೆ ಹೆಚ್ಚಾಗಬೇಕು: ಸಿಎಂ ಕಿವಿಮಾತು*

    ಪ್ರಗತಿವಾಹಿನಿ ಸುದ್ದಿ: ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ…

    Read More »
  • Karnataka News

    *ಕೆ.ಎಸ್.ಆರ್.ಟಿ.ಸಿ ಬಸ್-ಕಾರು ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು*

    ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿಘಾಟ್ ನಲ್ಲಿ ಈ…

    Read More »
  • Politics

    *ನನ್ನನ್ನು ಬೆಳೆಸಿದಂತೆ ಮುಂದೆ ಯತೀಂದ್ರನನ್ನೂ ಬೆಳೆಸಿ: ಕ್ಷೇತ್ರದ ಜನರಲ್ಲಿ ಸಿಎಂ ಸಿದ್ದರಾಮಯ್ಯ ಮನವಿ*

    ಪ್ರಗತಿವಾಹಿನಿ ಸುದ್ದಿ: ನನ್ನ ಕೊನೆಯ ಉಸಿರಿರುವವರೆಗೂ ರಾಜಕೀಯದಲ್ಲಿ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ವರುಣಾ ಹೋಬಳಿಯ ವರಕೋಡು ಗ್ರಾಮದಲ್ಲಿ ಬೀರೇಶ್ವರ ದೇವರ ದೇವಸ್ಥಾನ ಉದ್ಘಾಟಿಸಿ…

    Read More »
  • National

    *ಈ ದಿನದಂದು ತೆರೆಯಲಿದೆ ಕೇದಾರನಾಥ ಹಾಗೂ ಬದರಿನಾಥ ದೇವಾಲಗಳ ಬಾಗಿಲು*

    ಚಾರ್ ಧಾಮ್ ಯಾತ್ರೆಗೆ ನೋಂದಣಿ ಆರಂಭ ಪ್ರಗತಿವಾಹಿನಿ ಸುದ್ದಿ: ಹಿಂದೂಗಳ ಪವಿತ್ರ ಯಾತ್ರಾಸ್ಥಳಗಳ ಕೇದಾರನಾಥ ಹಾಗೂ ಬದರಿನಾಥ ದೇವಾಲಗಳ ಬಾಗಿಲು ತೆರೆಯುವ ದಿನಾಂಕವನ್ನು ದೇವಾಲಯದ ಸಮಿತಿ ಘೋಷಣೆ…

    Read More »
  • Politics

    *ಗ್ಯಾರಂಟಿ ಯೋಜನೆ ಹಿಂಪಡೆಯುವ ಬಗ್ಗೆ ಬಿಜೆಪಿಯಿಂದ ಅಧಿಕೃತ ನಿರ್ಣಯ ಮಂಡಿಸಿ, ಚರ್ಚಿಸೋಣ: ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು*

    ಪ್ರಗತಿವಾಹಿನಿ ಸುದ್ದಿ: “ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಿರಿ, ಮರುಪರಿಶೀಲನೆ ಮಾಡಿ ಎಂದು ಬಿಜೆಪಿಯಿಂದ ಅಧಿಕೃತ ತೀರ್ಮಾನ ಮಾಡಿ ಸದನದಲ್ಲಿ ನಿರ್ಣಯ ಮಂಡಿಸಿ, ಆನಂತರ ಜನರ ಮುಂದೆ ಸದನದಲ್ಲಿ ಇದರ…

    Read More »
  • Politics

    *ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಸಂಸದ ಬಸವರಾಜ್ ಬೊಮ್ಮಾಯಿ*

    ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಎಸ್ಸಿ ಸಮುದಾಯದ ಒಳ ಮೀಸಲಾತಿ ಜಾರಿ ಮಾಡಲು ವಿಶೇಷ ಸಂಪುಟ ಸಭೆ ಅಗತ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬದ್ದತೆ ಇದ್ದರೆ, ಸುಪ್ರೀಂ ಕೊರ್ಟ್…

    Read More »
  • Politics

    *ಬೆಂಗಳೂರಿಗೆ ಬಂದ ಒಡಿಶಾ ಕಾಂಗ್ರೆಸ್ ಶಾಸಕರು: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*

    ಪ್ರಗತಿವಾಹಿನಿ ಸುದ್ದಿ: “ನಾನು ಒಡಿಶಾ ಶಾಸಕರನ್ನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ. ಅಧಿವೇಶನ ಕಲಾಪ ಮುಗಿದ ಬಳಿಕ ನಾನು ಹೋಗಿ ಅವರನ್ನು ಭೇಟಿ ಮಾಡುತ್ತೇನೆ” ಎಂದು ಡಿಸಿಎಂ…

    Read More »
Back to top button