Kannada NewsKarnataka NewsLatestPolitics

*ಮಾಜಿ ಸಚಿವ ಬೈರತಿ ಬಸವರಾಜ್ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ಶಿವಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಚಿವ ಬೈರತಿ ಬಸವರಾಜ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ರೌಡಿಶೀಟರ್ ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮೀ ನಿದಿದ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

Home add -Advt

ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಎ5 ಆರೋಪಿಯಾಗಿದ್ದಾರೆ. ಜಗದೀಶ್ ಎ1, ಕಿರಣ್ ಎ2, ವಿಮಲ್ ಎ 3, ಅನಿಲ್ ಎ4 ರೋಪಿಗಳಾಗಿದ್ದಾರೆ.

ಕಿತ್ತನೂರು ಜಾಗದ ವಿಚಾರವಾಗಿ ಗಲಾಟೆ ನಡೆದಿ ಶಿವಪ್ರಕಾಶ್ ಕೊಲೆ ನಡೆದಿದೆ. ಸ್ಕಾರ್ಪಿಯೋದಲ್ಲಿ 8-9 ಜನರು ಬಂದು ಶಿವಪ್ರಕಾಶ್ ಗೆ ಬೆದರಿಕೆ ಹಾಕಿದ್ದರು. ಅಲ್ಲದೇ ಬೈರತಿ ಬಸವರಾಜ್ ಹಾಗೂ ಜಗದೀಶ್ ಮತ್ತಿತರರು ನನಗೆ ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ ಎಂದು ಹಲವು ಬಾರಿ ಮಗ ಹೇಳುತ್ತಿದ್ದ ಎಂದು ವಿಜಲಕ್ಷ್ಮೀ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button