Kannada NewsKarnataka NewsLatest
*ಬಾಂಬ್ ಬೆದರಿಕೆ: ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬಾಂಬ್ ಬೆದರಿಕೆ ಸಂದೇಶ ರವಾನಿಸಿ ಆತಂಕ ಸೃಷ್ಟಿಸುತ್ತಿದ್ದ ಪ್ರಮುಖ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಶ್ರೀನಿವಾಸ್ ಬಂಧಿತ ಆರೋಪಿ.ಈತ ಇತ್ತೀಚೆಗೆ ಹಲವೆಡೆ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದ.
ಕಳೆದ ಒಂದು ತಿಂಗಳಲ್ಲಿ ಸರ್ಕಾರಿ ಕಚೇರಿಗಳು, ಶಾಲೆಗಳು, ಕೋರ್ಟ್ ಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿ ಕಟ್ಟಡಗಳನ್ನು ಸ್ಫೋಟಿಸುವುದಾಗಿ ಹೆದರಿಸುತ್ತಿದ್ದ. ಪ್ರಕರಣ ಗಂಭೀರವಾಗಿ ಪರುಗಣಿಸಿದ ಪೊಲೀಸರು, ತನಿಖೆ ಚುರುಕುಗೊಳಿ, ಆರೋಪಿಯನ್ನು ಬಂಧಿಸಿದ್ದಾರೆ.




