Latest
ಮತ್ತೊಂದು ಬೆಂಕಿ ಅವಘಡ; ಹೊತ್ತಿ ಉರಿದ ಕಾರ್ಖಾನೆ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದ್ದು, ಹೊಸಗುಡ್ಡಹಳ್ಳಿಯಲ್ಲಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಮೈಸೂರು ರಸ್ತೆಯಲ್ಲಿರುವ ಕೆಮಿಕಲ್ ಫ್ಯಾಕ್ಟರಿ ಇದಾಗಿದ್ದು, ಏಕಾಏಕಿ ಅಗ್ನಿ ಅವಘಡ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.
ಕೆಮಿಕಲ್ ಫ್ಯಾಕ್ಟರಿಯಾಗಿದ್ದರಿಂದ ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತ ಪ್ರದೇಶಕ್ಕೂ ವ್ಯಾಪಿಸಿದ್ದು, ದಟ್ಟ ಹೊಗೆ ಆವರಿಸಿದೆ.




