Latest

*ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ ; ಕೂದಲೆಳೆ ಅಂತರದಲ್ಲಿ ಪಾರು*

 

ಪ್ರಗತಿವಾಹಿನಿ ಸುದ್ದಿ; ಸಾಗರ: ಬಜರಂಗದಳ ಕಾರ್ಯಕರ್ತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆಗೆ ಯತ್ನಿಸಿ ವಿಫಲವಾದ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಈ ಘಟನೆ ನಡೆದಿದೆ.

ಬಜರಂಗದಳ ಕಾರ್ಯಕರ್ತ ಸುನೀಲ್ ಎಂಬುವವರ ಮೇಲೆ ದಾಳಿಗೆ ಯತ್ನಿಸಲಾಗಿದೆ. ಸುನೀಲ್ ಮೇಲೆ ಸಮೀರ್ ಎಂಬಾತ ಮಚ್ಚು ಬೀಸಿದ್ದು, ಕ್ಷಣಾರ್ಧದಲ್ಲಿ ಕೂದಲೆಳೆ ಅಂತರದಲ್ಲಿ ಸುನೀಲ್ ಪಾರಾಗಿದ್ದಾರೆ.

Home add -Advt

ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಸುನೀಲ್ ಹತ್ಯೆಗೆ ಯತ್ನಿಸಲು ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

*’ಸಿದ್ದು ನಿಜ ಕನಸುಗಳು’ ವಿರುದ್ಧ ಕಾಂಗ್ರೆಸ್ ದೂರು ದಾಖಲು*

https://pragati.taskdun.com/siddu-nijakanasugalubookcongresscomplaint/

Related Articles

Back to top button