Kannada NewsLatest

ಮನೆ ಗೋಡೆ ಕುಸಿದು ಅವಶೇಷಗಳಡಿ ಸಿಲುಕಿದ್ದ ಮಹಿಳೆ ರಕ್ಷಣೆ

ಪ್ರಗತಿವಾಹಿನಿ ಸುದ್ದಿ; ಕಿತ್ತೂರು: ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ಅವಶೇಷಗಳ ಅಡಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಣ್ಣಿನಡಿ ಮಹಿಳೆ ಸಿಲುಕಿದ್ದರು. ಮಣ್ಣಿನಡಿ ಸಿಲುಕಿದ್ದ ಮಹಿಳೆ ರಕ್ಷಿಸಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಕಾಳವ್ವ ಗಂಭೀರವಾಗಿ ಗಾಯಗೊಂಡಿರುವ ಮಹಿಳೆ. ಬಿಮ್ಸ್ ನಲ್ಲಿ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂದು ಕುಟುಂಬದವರು ಆರೋಪಿಸಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಮನಗರಕ್ಕೆ ಆಗಮಿಸಿದ ಕಿತ್ತೂರು ವೀರಜ್ಯೋತಿ ಯಾತ್ರೆ

https://pragati.taskdun.com/latest/kitturu-veerajyoti-yatreramanagaramandya/

Related Articles

Back to top button