Kannada NewsKarnataka NewsLatest

*ಬಸ್ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟ ಚಾಲಕ: ಭೀಕರ ಅಪಘಾತ ಸಂಭವಿಸಿದರೂ ಪ್ರಾಣಾಪಾಯದಿಂದ ಬಚಾವ್ ಆದ ಪ್ರಯಾಣಿಕರು*

ಪ್ರಗತಿವಾಹಿನಿ ಸುದ್ದಿ: ಬಸ್ ಓಡಿಸುತ್ತಿದ್ದಾಗಲೇ ಚಾಲಕ ಹೃದಯಾಘಾತದಿಂದ ಮೃತಪಟ್ಟಿದ್ದು, ನಿಯಂತ್ರಣ ತಪ್ಪಿದ ಬಸ್ ಅಪಘಾತಕ್ಕೀಡಾದರೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.

Home add -Advt

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಾಳತ್ ಮನೆ ಬಳಿ ಪೂರ್ಣಿಮಾಟ್ರಾವೆಲ್ ಬಸ್ ನಲ್ಲಿ ಚಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ದಿಣ್ಣೆಗೆ ಡಿಕ್ಕಿ ಹೊಡೆದಿದೆ.

ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಘಟನೆ ನಡೆದಿದೆ. ಬಸ್ ಅಪಘಾತಕ್ಕೀಡಾದರೂ ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ.

ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ ಚಾಲನೆ ವೇಳೆಯೇ ಚಾಲಕ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

Related Articles

Back to top button