ಬೆಳಗಾವಿ ನ್ಯೂಸ್

  • Education

    *ಕಾನೂನುವ್ಯಾಸಂಗಕ್ಕೆಅಣಕುನ್ಯಾಯಾಲಯಸ್ಪರ್ಧೆಅಡಿಪಾಯ :  ಜ್ಯೋತಿ ಎಂ.*

    ಬೆಳಗಾವಿ ಆರ್.ಎಲ್.ಕಾನೂನು ಮಹಾವಿದ್ಯಾಲಯದಲ್ಲಿ ಅಣಕು ನ್ಯಾಯಾಲಯ ಸ್ಪರ್ಧೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿದ್ಯಾರ್ಥಿಗಳಿಗೆ ಅಣಕು ನ್ಯಾಯಾಲಯ ಸ್ಪರ್ಧೆ ಶೈಕ್ಷಣಿಕ ಚಟುವಟಿಕೆಗಿಂತ ಹೆಚ್ಚಿನದ್ದಾಗಿದೆ.  ಇದು ಕಾನೂನು  ಶಿಕ್ಷಣಕ್ಕೆ ಅಡಿಪಾಯವಾಗಿದೆ ಎಂದು ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಜ್ಯೋತಿ ಎಂ.ಹೇಳಿದರು. ಶುಕ್ರವಾರ ನಗರದ ಕೆಎಲ್ ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ 16 ನೇ ಎಂ.ಕೆ.ನಂಬಿಯಾರ್ ಸ್ಮಾರಕ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಅಣಕು ನ್ಯಾಯಾಲಯ ಸ್ಪರ್ಧೆ ಕೇವಲ ಕಾನೂನು ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿರದೆ ಭವಿಷ್ಯದ ಜೀವನಕ್ಕೂ ಅತ್ಯಂತ ಮಹತ್ವದಾಗಿದೆ. ವಾದವು ಚಿಕ್ಕದಾಗಿರಬೇಕು, ಸಂಕ್ಷಿಪ್ತವಾಗಿರಬೇಕು. ಕೆಲವೇ ಪದಗಳಲ್ಲಿ ಹೇಳಬೇಕು ಮತ್ತು ಸಂಕೀರ್ಣ ಸಮಸ್ಯೆಗಳನ್ನು ವ್ಯಕ್ತಪಡಿಸುವ  ಸಾಮರ್ಥ್ಯ ಇರಬೇಕು ಎಂದು ಅವರು ಸಲಹೆ ನೀಡಿದರು. ನ್ಯಾಯಾಲಯದ ಶಿಷ್ಟಾಚಾರಗಳು, ಪೀಠದ ಮೇಲಿನ ಗೌರವವೂ ಅಷ್ಟೇ ಮುಖ್ಯ ಎಂದು ಅವರು ಹೇಳಿದರು. ನ್ಯಾಯವಾದಿ ಮತ್ತು ಕೆಎಲ್ಎಸ್ ಸೊಸೈಟಿ ಕಾರ್ಯದರ್ಶಿ ಎಸ್.ವಿ.ಗಣಾಚಾರಿ ಮಾತನಾಡಿ, ಅಣಕು ನ್ಯಾಯಾಲಯ ಸ್ಪರ್ಧೆ ಕಾನೂನು ಶಿಕ್ಷಣದಲ್ಲಿ ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ. ಏಕೆಂದರೆ ಪಠ್ಯ ಪುಸ್ತಕವು ನಮಗೆ ಸೈದ್ಧಾಂತಿಕ ವಿಷಯವನ್ನು ಮಾತ್ರ ಕಲಿಸುತ್ತದೆ. ಅದರೆ, ಅಣಕು ನ್ಯಾಯಾಲಯ ಸ್ಪರ್ಧೆ ವಿದ್ಯಾರ್ಥಿಗಳಿಗೆ ಕಾನೂನು ಶಿಕ್ಷಣದ ಪ್ರಾಯೋಗಿಕ ಶಿಕ್ಷಣವನ್ನು ಅಭ್ಯಾಸ ಮಾಡಲು ವೇದಿಕೆಯನ್ನು ಒದಗಿಸುತ್ತದೆ. ಇದು ವಿದ್ಯಾರ್ಥಿಗಳು ಸಂಶೋಧನೆ, ವಕಾಲತ್ತು, ಸಾರ್ವಜನಿಕವಾಗಿ ಮಾತನಾಡುವ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಕೆಎಲ್ಎಸ್ ಸೊಸೈಟಿ ಅಧ್ಯಕ್ಷ ಪ್ರದೀಪ್ ಎಸ್. ಸಾವ್ಕರ್ ಮಾತನಾಡಿ, ವಿದ್ಯಾರ್ಥಿಯ ವೃತ್ತಿಜೀವನದಲ್ಲಿ ವಾದ ಮಂಡನೆ ಬಹಳ ಮುಖ್ಯ. ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಭಾಗವಹಿಸುವುದು, ಜತೆಗೆ ಇಂಟರ್ನ್‌ಶಿಪ್ ಕಾನೂನು ವಿದ್ಯಾರ್ಥಿಗಳಿಗೆ ದೀರ್ಘಾವಧಿಯಲ್ಲಿ ಸಹಾಯ ಮಾಡುತ್ತದೆ. ಇದು ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುತ್ತದೆ. ವಿದ್ಯಾರ್ಥಿಗಳನ್ನು ಓದಲು, ಸಂಶೋಧನೆ ಮಾಡಲು ಮತ್ತು ಕೆಲಸ ಮಾಡಲು ಪ್ರೇರಣೆ ಉಂಟುಮಾಡುತ್ತದೆ. ವಿದ್ಯಾರ್ಥಿಗಳು ನ್ಯಾಯಾಲಯದ ವಿಚಾರಣೆಗಳಿಗೆ ಹಾಜರಾಗಲು  ಉಪಯುಕ್ತವಾಗುತ್ತದೆ ಎಂದು ಹೇಳಿದರು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಮತ್ತು ನ್ಯಾಯವಾದಿ ಆರ್.ಎಸ್. ಮುತಾಲಿಕ್ ಅವರು ಕಾಲೇಜಿನ ಪರಂಪರೆ ಮತ್ತು ವಿದ್ಯಾರ್ಥಿಗಳ ಸಾಧನೆಗಳ ಬಗ್ಗೆ ವಿವರಿಸಿದರು.ಅಣಕು ನ್ಯಾಯಾಲಯ ಸ್ಪರ್ಧೆಯ ಸಂಯೋಜಕಿ ಹಾಗೂ ಪ್ರಾಧ್ಯಾಪಕಿ ಪ್ರೊ.ಅಶ್ವಿನಿ ಪರಬ್ ಅವರು ಸ್ಪರ್ಧೆಯ ನಿಯಮದ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು.  ವಿಜೇತರಿಗೆ ರೂ.50,000 ನಗದು ಮತ್ತು ಟ್ರೋಫಿ, ರನ್ನರ್ ಅಪ್ ತಂಡಕ್ಕೆ ಟ್ರೋಫಿ ಮತ್ತು ರೂ.30,000 ನಗದು ಬಹುಮಾನ, ಅತ್ಯುತ್ತಮ ಪುರುಷ ಸ್ಪರ್ಧಿಗೆ ರೂ. 15,000 ರೂಪಾಯಿ ನಗದು, ಅತ್ಯುತ್ತಮ ಮಹಿಳಾ ಸ್ಪರ್ಧಿಗೆ ರೂ.15,000 ರೂಪಾಯಿ ನಗದು, ಅತ್ಯುತ್ತಮ ಸ್ಮಾರಕ ಪ್ರಶಸ್ತಿ ಅಥವಾ ರೂ.15,000 ರೂಪಾಯಿ ನಗದು, ಮತ್ತು ಅತ್ಯುತ್ತಮ ಸಂಶೋಧಕರಿಗೆ ರೂ.10,000 ರೂಪಾಯಿ ನಗದು ಮತ್ತು ಅತ್ಯುತ್ತಮ ಸ್ಪರ್ಧಿಗೆ ಅಶೋಕ್ ಎನ್ ಪೋತದಾರ ಹೆಸರಿನ ಬೆಸ್ಟ್ ಮೂಟರ್ ಸ್ಪರ್ಧಿಗೆ ರೂ. 6,050 ನಗದು ಬಹುಮಾನ ನೀಡಲಾಗುತ್ತದೆ. ಈ ಸಮಾರಂಭವನ್ನು ಕಾಲೇಜಿನ ಮೂಟ್ ಕೋರ್ಟ್ ವಿಭಾಗ ಆಯೋಜಿಸಿತ್ತು. ಕೆಎಲ್ಎಸ್ ಸೊಸೈಟಿ ಚೇರ್ಮನ್ ಹಾಗೂ ನ್ಯಾಯವಾದಿ ಎ.ಕೆ.ಟಗಾರೆ,  ಕಾರ್ಯದರ್ಶಿ ವಿ.ಎಂ. ದೇಶಪಾಂಡೆ, ಪ್ರಾಚಾರ್ಯ ಡಾ. ಎ.ಎಚ್.ಹವಾಲ್ದಾರ್,  ಅಣಕು ನ್ಯಾಯಾಲಯ ಸ್ಪರ್ಧೆಯ ಸಂಯೋಜಕಿ ಸುನಿಧಿ ಜೋಶಿ, ಕಾಲೇಜಿನ ವಿದ್ಯಾರ್ಥಿ ಪ್ರಧಾನ ಕಾರ್ಯದರ್ಶಿ ತನ್ಮಯಿ ಸರಾಫ್ ಮತ್ತು ಮಹಿಳಾ ಪ್ರತಿನಿಧಿ ಚಂದ್ರಲೇಖಾ ಪಾಟೀಲ, ಎಲ್ಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು. Belagavi: Inauguration of the…

    Read More »
  • Belagavi News

    *ಎಲ್ಲಾ ತಾಲೂಕು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ*

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು, ಬೆಳಗಾವಿ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲಾ ತಾಲೂಕು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯ ಕುಡಿಯುವ…

    Read More »
  • Belagavi News

    *ಭಕ್ತರ ಗಮನಕ್ಕೆ: ಶ್ರೀಶೈಲಂನಲ್ಲಿ ಸ್ಪರ್ಷ ದರ್ಶನಕ್ಕೆ ಅವಕಾಶವಿಲ್ಲ*

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಶ್ರೀಕ್ಷೇತ್ರ ಶ್ರೀಶೈಲಂನಲ್ಲಿ ಮಾ.16 ರಿಂದ 20ರ ವರೆಗೆ 5 ದಿನಗಳ ಕಾಲ ಯುಗಾದಿ ಮಹೋತ್ಸವದ ಆಚರಣೆ ಜರುಗಲಿದ್ದು, ಶ್ರೀ…

    Read More »
  • Belagavi News

    *ಬೆಳಗಾವಿಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ*

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಬಸವನ ಕುಡಚಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಜಾತ್ರೆಯ ಪ್ರಯುಕ್ತ ಜಾತ್ರೆಯಲ್ಲಿ ಯಾವುದೇ ಅಹಿತಕರ…

    Read More »
  • Belagavi News

    *ಯುಗಾದಿ ಹಬ್ಬ: ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ* 

    ಪ್ರಗತಿವಾಹಿನಿ ಸುದ್ದಿ: ಮುಂಬರುವ ಯುಗಾದಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಕರ್ನಾಟಕದ ವಿವಿಧ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ…

    Read More »
  • Kannada News

    *ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ ಶುರು: 14 ಶಾಸಕರು ರೆಸಾರ್ಟ್ ಗೆ ಶಿಪ್ಟ್*

    ಪ್ರಗತಿವಾಹಿನಿ ಸುದ್ದಿ: ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಹೆಚ್ಚಾಗಿರುವ ನಡುವೆ ಕಾಂಗ್ರೆಸ್ ತನ್ನ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ರೆಸಾರ್ಟ್ ರಾಜಕೀಯಕ್ಕೆ ಮುಂದಾಗಿದೆ.  ಈ…

    Read More »
  • Kannada News

    *ಜೈಲಿನಿಂದ ಹೊರ ಬರುತ್ತಿದ್ದಂತೆ ಟೆಂಪಲ್ ರನ್ ನಡೆಸಿದ ಶಾಸಕ ಚಂದ್ರು ಲಮಾಣಿ*

    ಪ್ರಗತಿವಾಹಿನಿ ಸುದ್ದಿ: ಲಂಚ ಸ್ವೀಕರಿಸಿದ ಆರೋಪದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರಿಗೆ ಜಾಮೀನು (Bail) ದೊರೆತಿದ್ದು, ಜೈಲಿನಿಂದ ಬಿಡುಗಡೆ ಆಗುತ್ತಿದ್ದಂತೆ…

    Read More »
  • Belagavi News

    *ಕಣ್ಣಿನ ಚಿಕಿತ್ಸೆಗೆ ಮಾಧುರಿ ಜಾಧವ್ ಫೌಂಡೇಶನ್ ಮೂಲಕ ಚೆಕ್ ಹಸ್ತಾಂತರ*

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪಟಾಕಿ ಸ್ಫೋಟದಲ್ಲಿ ಕಣ್ಣು ಕಳೆದುಕೊಂಡ ಶಹಾಪುರದ ಶಿವ ಲೋಹರ್ ಅವರ ಚಿಕಿತ್ಸೆಗೆ ಸಹಾಯದ ಮಹಾಪೂರ ಹರಿದು ಬರುತ್ತಿದ್ದು, ಸಮಾಜದ ವಿವಿಧ ವರ್ಗಗಳು ಅವರಿಗೆ…

    Read More »
  • Kannada News

    *ಜಮ್ಮು-ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ*

    ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಅವರು ಪಾರಾಗಿದ್ದು ಆರೋಪಿ ಅರೆಸ್ಟ್ ಆಗಿದ್ದಾನೆ.  ಹತ್ಯೆ…

    Read More »
  • Belagavi News

    KLS GIT ವಿದ್ಯಾರ್ಥಿಗಳ ಅದ್ಭುತ ಸಾಧನೆ

    ರಾಷ್ಟ್ರ ಮಟ್ಟದ ಮಣಿಪಾಲ್ ರೆವೆಲ್ಸ್ ಕಪ್ 2026 ಮತ್ತು ರಾಜ್ಯ ಮಟ್ಟದ ಬೆಸ್ಟ್ ಫಿಸಿಕ್ ಸ್ಪರ್ಧೆಯಲ್ಲಿ KLS GIT ವಿದ್ಯಾರ್ಥಿಗಳ ಅದ್ಭುತ ಸಾಧನೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ…

    Read More »
Back to top button