Belagavi NewsBelgaum NewsKannada NewsKarnataka NewsLatest

*ರೌಡಿ ಆನೆ ಸೆರೆ*

ರೈತರಿಗೆ ತೊಂದರೆ ಕೊಡುತ್ತಿದ್ದ ಆನೆ ಹಿಡಿಯುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಕಳೆದ ಎರಡು ತಿಂಗಳಿಂದ ಖಾನಾಪುರದ ಕರಂಬಳ ಚಾಪಗಾಂವ ಗ್ರಾಮಗಳ ಸುತ್ತ ರೈತರಿಗೆ ತೊಂದರೆ ಕೊಡುತ್ತಿದ್ದ ಆನೆಯನ್ನ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

Home add -Advt

ಗುರುವಾರ ಬೆಳಗ್ಗೆ ಕಾರ್ಯಾಚರಣೆ ಕೈಗೊಂಡ ಅರಣ್ಯ ಇಲಾಖೆ ಸಕ್ರೆಬೈಲು ಆನೆ ಬಿಡಾರದ ನುರಿತ ಆನೆಗಳ ಸಹಾಯದಿಂದ ಪುಂಡ ಆನೆಯನ್ನ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಕಳೆದ ಎರಡು ತಿಂಗಳಿನಿಂದ ಖಾನಾಪುರ ತಾಲೂಕಿನಲ್ಲಿ ಕಾಡಾನೆ ದಾಳಿಗೆ ರೈತರು ಆತಂಕದಲ್ಲಿದ್ದರು. ಇದಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಶಿವಮೊಗ್ಗದ ಸಕ್ರಬೈಲು ಆನೆಬಿಡಾರದ ಆನೆಗಳ ತಂಡ ಆನೆ ಹಿಡಿಯುವ ಕಾರ್ಯಾಚರಣೆ ನಡೆಸುವ ಮೂಲಕ ಪರಿನಿತ ಆನೆಗಳ ತಂಡಕ್ಕೆ ಖಾನಾಪುರ ಎಸಿಎಫ್ ಸುನೀತಾ ನಿಂಬರಗಿ ಪೂಜೆ ಸಲ್ಲಿಸಿ ಕಾರ್ಯಾಚರಣೆ ನಡೆಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಿದ್ದು ಕಾಡಾನೆಯ ಚಲನವಲನಗಳ ಬಗ್ಗೆ ಸುಕ್ಷ್ಮವಾಗಿ ಗಮನಿಸಿ ಕಾರ್ಯಾಚರಣೆ ನಡೆಸಿದ್ದಾರೆ.

ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಮರಿಯಾ ಕ್ರಿಷ್ಟು, ಖಾನಾಪುರ ಆರ್ ಎಫ್ ಒ ಶ್ರೀಕಾಂತ್ ಪಾಟೀಲ್, ನಂದಗಡದ ವಲಯ ಅರಣ್ಯಾಧಿಕಾರಿ ಮಾಧುರಿ ದಳವಾಯಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಈ ಕಾರ್ಯಾಚರಣೆಗೆ ವಿಶೇಷ ಆಸಕ್ತಿಯಿಂದ ಕಾಡಾನೆ ಸೆರೆ ಹಿಡಿಯುವ ಕೆಲಸ ಮಾಡಿದ್ದಾರೆ. ಈ ಎಲ್ಲಾ ಪ್ರದೇಶಗಳಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು, ಪೋಲಿಸ್ ಇಲಾಖೆಯ ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿ ಜಾಗ್ರತೆ ವಹಿಸಿದ್ದರು.

Related Articles

Back to top button