Latest

*ಭಕ್ತರಂತೆ ಮಠಕ್ಕೆ ಬಂದು ಸ್ವಾಮೀಜಿಗೆ ಬೆದರಿಕೆ ಹಾಕಿದ ಕಳ್ಳರು; ಹಣ, ಚಿನ್ನಾಭರಣ ಕದ್ದು ಪರಾರಿ*

ಪ್ರಗತಿವಾಹಿನಿ ಸುದ್ದಿ: ಭಕ್ತರಂತೆ ಮಠಕ್ಕೆ ಬಂದ ಕಳ್ಳರ ಗುಂಪು ಸ್ವಾಮೀಜಿಗೆ ಬೆದರಿಕೆ ಹಾಕಿ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಶ್ರೀ ವಿಜಯ ಮಹಾಂತೇಶ್ವರ ಶಾಖಾ ಮಠದಲ್ಲಿ ನಡೆದಿದೆ.

ಮಧ್ಯರಾತ್ರಿ ದರೋಡೆಕೋರರ ಗುಂಪೊಂದು ಭಕ್ತರ ಸೋಗಿನಲ್ಲಿ ಮಠಕ್ಕೆ ಬಂದಿದೆ. ಮಠದಲ್ಲಿ ಸಿದ್ದಲಿಂಗ ಸ್ವಾಮೀಜಿ ಮಲಗಿದ್ದರು. ಈ ವೇಳೆ ಸ್ವಾಮೀಜಿಯವರನ್ನು ಎಬ್ಬಿಸಿದ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಬಳಿಕ ಮಠದಲ್ಲಿದ್ದ ಚಿನ್ನಾಭರಣ, ಹಣ ದೋಚಿ ಪರಾರಿಯಾಗಿದ್ದಾರೆ.

ಸುಮಾರು 80 ಗ್ರಾಂ ಚಿನ್ನ, 7 ಕೆಜಿ ಬೆಳ್ಳಿ ಆಭರಣ, 20 ಲಕ್ಷ ನಗದು ಸೇರಿದಂತೆ 35 ಲಕ್ಷ ಮೌಲ್ಯದ ವಸ್ತುಗಳನ್ನು ಕದ್ದೊಯ್ದಿದ್ದಾರೆ. ಸಿದ್ದಲಿಂಗ ಸ್ವಾಮೀಜಿ ಲಿಂಗಸಗೂರು ಠಾಣೆಯಲ್ಲಿ ದೂರು ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Home add -Advt

Related Articles

Back to top button