Kannada NewsLatestNational

*ಆತ್ಮಹತ್ಯೆಗೆ ಯತ್ನಿಸಿದ್ದ ಸಂಸದ ಹೃದಯಾಘಾತದಿಂದ ವಿಧಿವಶ*

ಪ್ರಗತಿವಾಹಿನಿ ಸುದ್ದಿ: ಎರಡು ದಿನಗಳ ಹಿಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯನಿಸಿದ್ದ ತಮಿಳುನಾಡು ಸಂಸದ ಗಣೇಶ ಮೂರ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಡಿಎಂಕೆ ಸಂಸದ ಗಣೇಶ್ ಮೂರ್ತಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಕೊಯಮತ್ತೂರು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗಣೇಶ್ ಮೂರ್ತಿಗೆ ಡಿಎಂಕೆಯಿಂದ ಈರ‍ೋಡ್ ಕ್ಷೇತ್ರದ ಟಿಕೆಟ್ ಘೋಷಣೆಯಾಗಿತ್ತು. ಹಾಲಿ ಸಂಸದರೂ ಆಗಿರುವ ಗಣೇಶ್ ಮೂರ್ತಿ ಅವರ ದುಡುಕಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

Related Articles

Back to top button