Kannada NewsKarnataka NewsLatestPolitics

*ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ಮಗು ಕರುಣಿಸಿದ ಪ್ರಕರಣ: ಮಹತ್ವದ ಸಲಹೆ ನೀಡಿದ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಮುಖಂಡನ ಪುತ್ರನಿಂದ ಲವ್ ಸೆಕ್ಸ್ ದೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಸಲಹೆ ನೀಡಿದೆ.

ಪುತ್ತೂರು ಬಿಜೆಪಿ ಮುಖಂಡಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯನ್ನಾಗಿ ಮಾಡಿ ಮಗು ಕರುಣಿಸಿ ಮೋಸಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಸಲಹೆ ನೀಡಿದೆ.

ತನ್ನ ವಿರುದ್ಧದ ಪ್ರಕರಣ ರದ್ದು ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಯುವತಿಗೆ ಆರೋಪಿ ಕೃಷ್ನ ಜಿ.ರಾವ್ ನಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೇ ಯುವತಿ ಹಾಗೂ ಮಗುವನ್ನು ಅನಾಥವನ್ನಾಗಿಸುವುದು ಸರಿಯಲ್ಲ. ತಂದೆಯಾಗಿರುವುದರಿಂದ ಮಗುವಿನ ಆರೈಕೆ ಮಾಡುವುದು ಆರೋಪಿ ಕರ್ತವ್ಯ ಎಂದು ತಿಳಿಸಿದೆ.

ಅಲ್ಲದೇ ಯುವತಿಗೆ ಮಾಸಿಕ 10 ಸಾವಿರ ಜೀವನಾಂಶ ನೀಡಲು ಸಿದ್ದರಿದ್ದಾರಾ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಪ್ರಶ್ನಿಸಿದ್ದು, ಇದಕ್ಕೆ ಅಭಿಪ್ರಾಯ ತಿಳಿಸಿ ಎಂದು ಹೇಳಿ ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಮುಂದೂಡಿದೆ.

Home add -Advt


Related Articles

Back to top button