Latest

ತಾಳಗುಪ್ಪಾ – ಸಿದ್ದಾಪುರ – ಶಿರಸಿ – ಹುಬ್ಬಳ್ಳಿ ರೈಲು ಮಾರ್ಗ ಸರ್ವೇ ಟೆಂಡರ್

ಪ್ರಗತಿವಾಹಿನಿ ಸುದ್ದಿ, ಶಿರಸಿ –  ತಾಳಗುಪ್ಪಾದಿಂದ – ಸಿದ್ದಾಪುರ – ಶಿರಸಿ – ಹುಬ್ಬಳ್ಳಿ ರೈಲು ಮಾರ್ಗ ವಿಸ್ತರಣೆ ಯೋಜನೆಯ ಸರ್ವೇ ಕಾರ್ಯದ ಟೆಂಡರ್ ಪ್ರಕ್ರಿಯೆ ಇಂದು ಪೂರ್ಣಗೊಂಡಿದ್ದು, ಮುಂದಿನ 6 ತಿಂಗಳಲ್ಲಿ ಸರ್ವೆ ಕಾರ್ಯ ಪೂರ್ಣಗೊಳ್ಳಲಿದೆ.

ಶಿರಸಿ – ಸಿದ್ದಾಪುರ ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಕುರಿತು ಮಾಹಿತಿ ನೀಡಿದ್ದಾರೆ.

Home add -Advt

ಒಮೇಗಾ ಅನಾಲೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ಸರ್ವೇ ಕಾರ್ಯದ ಟೆಂಡರ್ ಪಡೆದಿದೆ.  ಸರ್ವೇ ಪ್ರಕ್ರಿಯೆಯಲ್ಲಿ ಯೋಜನೆಯ ವೆಚ್ಚ, ಯೋಜನೆಗೆ ಬೇಕಾಗುವ ಭೂಮಿಯ ಅವಶ್ಯಕತೆ, ಅವಶ್ಯವಿರುವ ರೈಲ್ವೇ ಸ್ಟೇಷನ್ ಗಳ ಸಂಖ್ಯೆ, ರೈಲ್ವೇ ಮಾರ್ಗ ಜೋಡಣೆ ಹಾಗೂ ಇನ್ನಿತರ ಅಂಶಗಳು ಒಳಗೊಂಡಿರುತ್ತವೆ‌.

ಈ ಸರ್ವೇ ಪ್ರಕ್ರಿಯೆಯನ್ನು ಮುಂದಿನ 6 ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸಿ, ಕೇಂದ್ರ ರೈಲ್ವೇ ಸಚಿವಾಲಯಕ್ಕೆ  ವರದಿ ಸಲ್ಲಿಸಲಿದ್ದಾರೆ. ಯೋಜನೆಯ ಅನುಷ್ಟಾನ ಹಂತದಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಕಾಗೇರಿ ಕೋರಿದ್ದಾರೆ.

Related Articles

Back to top button