Latest

ಲಂಚ ಪಡೆದ ಪ್ರಕರಣ; ಪಟ್ಟಣ ಪಂಚಾಯಿತಿ ಸದಸ್ಯನ ಸದಸ್ಯತ್ವ ವಜಾ 

ಪ್ರಗತಿವಾಹಿನಿ ಸುದ್ದಿ, ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕಾರ್ಗಲ್-ಜೋಗ ಪಟ್ಟಣ ಪಂಚಾಯಿತಿ ಸದಸ್ಯರೊಬ್ಬರು ಲಂಚ (Bribe) ಪಡೆಯುವಾಗ ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೇಸ್ ಗೆ ಸಂಬಂಧಿಸಿದಂತೆ ಅವರ ಸದಸ್ಯತ್ವವನ್ನು ವಜಾಗೊಳಿಸಲಾಗಿದೆ.

ಜೋಗದ 8ನೇ ವಾರ್ಡ್‌ನ ಸದಸ್ಯ ಕೆ.ಸಿ. ಹರೀಶ್ ಗೌಡ ಕೋಳಿ ಅಂಗಡಿ ಮಾಲೀಕರೊಬ್ಬರಿಂದ ಇತ್ತೀಚೆಗೆ ಲಂಚ ಪಡೆಯುವಾಗ ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಅವರು ಬಜಾರ್ ಲೈನ್‍ನ ಕೋಳಿ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಗೆ ಪರವಾನಗಿ ಮಾಡಿಸಿಕೊಡುವುದಾಗಿ ಹೇಳಿ 50 ಸಾವಿರ ರೂ. ಲಂಚ ಕೇಳಿದ್ದರು. ಮನೆಯಲ್ಲಿ ಲಂಚದ ಹಣ ತೆಗೆದುಕೊಳ್ಳುವಾಗ ಲೋಕಾಯುಕ್ತರು ದಾಳಿ ನಡೆಸಿದ್ದರು.

ಈ ವೇಳೆ ಗಾಬರಿಯಲ್ಲಿ ಹರೀಶ್ ಗೌಡ ಹಣವನ್ನು ಗ್ಯಾಸ್ ಸ್ಟೌ ಮೇಲಿಟ್ಟು ಸುಟ್ಟು ಹಾಕಲು ಪ್ರಯತ್ನಿಸಿದ್ದರು. ಇದನ್ನು ತಡೆದು ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ (Corruption) ಪ್ರತಿಬಂಧಕ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿದ್ದರು.

ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಕರ್ನಾಟಕ ಪುರಸಭಾ ಕಾಯ್ದೆಯನ್ವಯ ತಕ್ಷಣ ಜಾರಿಗೆ ಬರುವಂತೆ ಹರೀಶ್ ಗೌಡ ಅವರನ್ನು ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

Home add -Advt

 

https://pragati.taskdun.com/it-is-not-right-to-talk-lightly-about-those-who-hold-the-position-of-chief-minister-sasikala-jolle/

ಬೆಳಗಾವಿಯಲ್ಲಿ ಕುಂದಾ ತಿಂದು ಡಾನ್ಸ್ ಮಾಡಿದ ಹ್ಯಾಟ್ರಿಕ್ ಹೀರೋ; ಶಿವಣ್ಣನ

‘ವೇದ’ಕ್ಕೆ ಕುಂದಾನಗರಿಯ ಅಭಿಮಾನಿಗಳ ಪ್ರೇಮದ ನಾದ

https://pragati.taskdun.com/hatric-hero-shivraj-kumar-visits-belagavi/

*ಸಾಹಿತ್ಯ ಲೋಕಕ್ಕೆ ಉತ್ಕೃಷ್ಟ ಮುನ್ನುಡಿ ಬರೆಯಲಿದೆ ಸಿಎಂ ಬೊಮ್ಮಾಯಿ*

https://pragati.taskdun.com/akhila-bharata-kannada-sahitya-sammelanacm-basavaraj-bommaihaveri/

Related Articles

Back to top button