Latest

ಅಂಗವಿಕಲನ ಮೇಲೆ ಹರಿದ KSRTC ಬಸ್; ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಮೈಸೂರು: ರಸ್ತೆಬದಿ ಸಾಗುತ್ತಿದ್ದ ವಿಶೇಷ ಚೇತನ ವ್ಯಕ್ತಿಯ ಮೇಲೆ ಕೆ ಎಸ್ ಆರ್ ಟಿಸಿ ಬಸ್ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಸಂಭವಿಸಿದೆ.

ಹ್ಯಾಂಡ್ ಪೋಸ್ಟ್ ಬಳಿ ಈ ದುರಂತ ಸಂಭವಿಸಿದ್ದು, ಸಾಗರೆ ಗ್ರಾಮದ ಚಿಕ್ಕಿಪುಟ್ಟ ಮೃತ ದುರ್ದೈವಿ. ರಸ್ತೆಯ ಪಕ್ಕದಲ್ಲಿ ಭಿಕ್ಷೆ ಬೇಡುತ್ತಾ ಸಾಗಿದ್ದ ವಿಶೇಷ ಚೇತನನ ಮೇಲೆ ಬಸ್ ಹರಿದಿದೆ. ಅಪಘಾತದ ತೀವ್ರತೆಗೆ ವ್ಯಕ್ತಿಯ ತಲೆ ಛಿದ್ರವಾಗಿದೆ. ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಕೆ ಎಸ್ ಆರ್ ಟಿಸಿ ಬಸ್ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಸಾರ್ವಜನಿಕರು ಬಸ್ ಚಾಲಕ ಹಾಗೂ ನಿರ್ವಾಹಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

ಕಿತ್ತೂರು ಉತ್ಸವಕ್ಕೆ ಶುಭ ಕೋರಿದ ದಿನವೇ ಇಹಲೋಕ ತ್ಯಜಿಸಿದ ಆನಂದ ಮಾಮನಿ

https://pragati.taskdun.com/politics/anand-mamaniwishes-for-kitturu-utsavaon-his-last-day/

Related Articles

Back to top button