Kannada NewsLatest
ಹಾವು ಕಚ್ಚಿ ಸ್ವಾಮೀಜಿ ಸಾವು

ಪ್ರಗತಿವಾಹಿನಿ ಸುದ್ದಿ, ಚಾಮರಾಜನಗರ – ಇಲ್ಲಿಯ ಗೋಪಾಲಪುರದ ಕೋಲೇಶ್ವರ ಮಠದ ಗುರುಮಲ್ಲ ಸ್ವಾಮೀಜಿ ನಿಧನರಾಗಿದ್ದಾರೆ.
ಅವರಿಗೆ 44 ವರ್ಷ ವಯಸ್ಸಾಗಿತ್ತು.
ಶನಿವಾರ ಕಾರ್ಮಿಕರ ಕೆಲಸದ ಮೆಲುಸ್ತುವಾರಿ ನೋಡಲು ಹೋದ ಸಂದರ್ಭದಲ್ಲಿ ಸ್ವಾಮೀಜಿಗೆ ಹಾವು ಕಚ್ಚಿತ್ತು. ತಕ್ಷಣ ಗುಂಡ್ಲುಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಚಾಮರಾಜ ನಗರಕ್ಕೆ ಕಳಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾದರು. ಭಾನುವಾರ ಅವರ ಅಂತ್ಯಕ್ರಿಯೆ ನಡೆಯಲಿದೆ.



