Latest

ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟ ಕಾಂಗ್ರೆಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಸದನದ ಒಳಗು ಹಾಗೂ ಹೊರಗೂ ಪ್ರತಿಭಟನೆ ನಡೆಸುತ್ತಿದ್ದು, ಇದೀಗ ರಾಜ್ಯಾದ್ಯಂತ ನಾಳೆ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.

ನಾಳೆ ಎಲ್ಲಾ ತಾಲೂಕು ಕೇಂದ್ರ ಹಾಗೂ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಿ, ತಾಕೂಕು ಕಚೇರಿಗೆ ಮುತ್ತಿಗೆ ಹಾಕುವಂತೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

Home add -Advt

ಅಹೋರಾತ್ರಿ ಧರಣಿಗೆ ಸರ್ಕಾರ ಮಣಿಯುವ ಸೂಚನೆಯಿಲ್ಲ. ನಾಳೆ ಅಧಿವೇಶನದಲ್ಲಿ ಕಾಂಗ್ರೆಸ್ ಧರಣಿ ಮುಂದುವರೆಸಲಿದೆ. ಇದೇ ಸಮಯದಲ್ಲಿ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಕೇಸರಿ ಬಾವುಟ ಮುಂದೊಂದು ದಿನ ರಾಷ್ಟ್ರಧ್ವಜ ಮಾಡಬಹುದು ಎಂದು ಈಶ್ವರಪ್ಪ ನೀಡಿರುವ ಹೇಳಿಕೆ ರಾಷ್ಟ್ರಧ್ವಜಕ್ಕೆ ಮಾಡಿರುವ ಅಪಮಾನ. ಪ್ರಜಾಪ್ರಭುತ್ವ ದೇಶದಲ್ಲಿ ದೇಶದ ಸ್ವಾಭಿಮಾನಕ್ಕೆ ಧಕ್ಕೆಯಾಗುವಂತೆ ಹೇಳಿಕೆ ನೀಡಿದ್ದಾರೆ. ದೇಶದ ಸ್ವಾಭಿಮಾನ, ರಾಷ್ಟ್ರಧ್ವಜದ ಗೌರವ ಉಳಿಸಬೇಕಾಗಿದೆ. ಸಚಿವರು ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲಿಸಲ್ಲ ಎಂದು ಕಿಡಿಕಾರಿದ್ದಾರೆ.

ಹೈಕಮಾಂಡ್ ಸೂಚನೆ; ನಾಳೆ ಬೆಳಿಗ್ಗೆ ರಾಜ್ಯ ಬಿಜೆಪಿ ಮಹತ್ವದ ಮೀಟಿಂಗ್
ಶಿವಮೊಗ್ಗದಲ್ಲಿ ಯುವತಿ ಚುಡಾಯಿಸಿದ ಯುವಕರು; ಇಬ್ಬರ ಬರ್ಬರ ಹತ್ಯೆ

Related Articles

Back to top button