Kannada NewsKarnataka NewsLatest
ಸವದತ್ತಿ ಯಲ್ಲಮ್ಮನಿಗೆ ವಿಶೇಷ ಪೂಜೆ

ಪ್ರಗತಿವಾಹಿನಿ ಸುದ್ದಿ, ಸವದತ್ತಿ – ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಹಿನ್ನೆಲೆಯಲ್ಲಿ ಸವದತ್ತಿಯಲ್ಲಿ ಬುಧವಾರ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಶಾಸಕ ಆನಂದ ಮಾಮನಿ, ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಕೊಟಾರಗಸ್ತಿ ಉಪಸ್ಥಿತಿಯಲ್ಲಿ ದೇವಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ನಂತರ ಸಿಹಿ ಹಂಚಿ ಸಂಭ್ರಮಿಸಲಾಯಿತು.




