Kannada NewsKarnataka News

ಪ್ರತಿಷ್ಠಿತ ಕೆಂಪೇಗೌಡ ಪ್ರಶಸ್ತಿ ಪ್ರಕಟ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕೆಂಪೇಗೌಡ ಜಯಂತಿ ಅಂಗವಾಗಿ ಪ್ರತಿ ವರ್ಷ ನೀಡುವ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಜಯದೇವ ಹೃದ್ರೋಗ ಆಸ್ಪತ್ರೆ, ಯುವ ಉದ್ಯಮಿ ನಿತೀನ್ ಕಾಮತ್ ಹಾಗೂ ಯುವ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶಸ್ತಿ ವಿಜೇತರ ಹೆಸರು ಪ್ರಕಟಿಸಿದರು.

Home add -Advt

ಈ ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ಬಿ.ಎಲ್ ಶಂಕರ್ ಅವರ ನೇತೃತ್ವದ ಸಮಿತಿ ರಚನೆ ಮಾಡಲಾಗಿತ್ತು. ಈ ಸಮಿತಿ ಚರ್ಚೆ ಮಾಡಿ ಮೂವರು ಸಾಧಕರ ಆಯ್ಕೆ ಮಾಡಿದೆ.

ಈ ಪ್ರಶಸ್ತಿ ಜೊತೆಗೆ 5 ಲಕ್ಷ ನೀಡುವ ಪದ್ಧತಿ ನಡೆದುಕೊಂಡು ಬಂದಿದೆ.

ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಡಾ. ಮಂಜುನಾಥ್ ಅವರಿಂದ ಕಸಗುಡಿಸುವ ಕೆಲಸಗಾರರವರೆಗೂ ಎಲ್ಲರೂ ಸೇವೆ ಸಲ್ಲಿಸಿದ್ದು, ಹೀಗಾಗಿ ಈ ಸಂಸ್ಥೆಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. 1600 ಬೆಡ್ ಸೌಲಭ್ಯ ಹೊಂದಿರುವ ಆಸ್ಪತ್ರೆಯು ಬಹಳ ಕಡಿಮೆ ದರದಲ್ಲಿ ಎಲ್ಲಾ ವರ್ಗದ ಜನರಿಗೆ ಆರೋಗ್ಯ ಸೇವೆ ನೀಡುತ್ತಾ ಬಂದಿದೆ.

ಇನ್ನು ಕಿರಿಯ ವಯಸ್ಸಿನಲ್ಲೇ ಜೇರೋಧ ಎಂಬ ನವೋದ್ಯಮ ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಬೆಳೆದಿರುವ ನಿತಿನ್ ಕಾಮತ್ ಅವರನ್ನು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, ನವೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ. ಈ ಸಂಸ್ಥೆಯಿಂದ ಬರುವ 25% ರಷ್ಟು ದುಡಿಮೆ ಹಣವನ್ನು ಸಾಮಾಜಿಕ ಸೇವೆಗೆ ಮುಡಿಪಿಟ್ಟಿದ್ದಾರೆ.

ಇನ್ನು ಬೆಂಗಳೂರಿನ ಯುವ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರನ್ನು ಕೂಡ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅದಿತಿ ಅಶೋಕ್ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ನಾಲ್ಕನೇ ಸ್ಥಾನ ಪಡೆದು ದೇಶಕ್ಕೆ ಕೀರ್ತಿ ತಂದಿದ್ದರು. ವಿಶ್ವ ಗಾಲ್ಫ್ ಕ್ರೀಡೆಯಲ್ಲಿ ಎತ್ತರದ ಸಾಧನೆ ಮಾಡಿರುವ ಆಟಗಾರ್ತಿ ಅದಿತಿ ಅಶೋಕ್ ಆಗಿದ್ದಾರೆ.

ಈ ಬಾರಿ ಆರೋಗ್ಯ, ಉದ್ದಿಮೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಈ ಮೂವರು ವ್ಯಕ್ತಿಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಸಾಧಕರಿಗೆ ಮಂಗಳವಾರ ವಿಧಾನಸೌಧದಲ್ಲಿ ನಡೆಯಲಿರುವ 514ನೇ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಕಳೆದ ಸರ್ಕಾರ ಹಾಸನದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಿತ್ತು ಅದನ್ನು ಅಡ್ಡಿಪಡಿಸಲು ನಾವು ಇಚ್ಛಿಸುವುದಿಲ್ಲ. ಬೆಂಗಳೂರಿನ ಕಾರ್ಯಕ್ರಮ ಮುಗಿಸಿ ನಂತರ ಹಾಸನ ಕಾರ್ಯಕ್ರಮಕ್ಕೆ ತೆರಳುತ್ತೇನೆ ಎಂದು ತಿಳಿಸಿದರು.

Related Articles

Back to top button