Kannada NewsKarnataka NewsLatest
ಇಂದು ಬಿಜೆಪಿಯಿಂದ ಬೌದ್ಧಿಕ ಸಹಮಿಲನ ಕಾರ್ಯಕ್ರಮ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರತೀಯ ಜನತಾ ಪಾರ್ಟಿ ಬೆಳಗಾವಿ ಘಟಕದಿಂದ ಇಲ್ಲಿನ ಉದ್ಯಮಬಾಗದ ಫೌಂಡ್ರಿ ಕ್ಲಸ್ಟರ್ ನಲ್ಲಿ ಮೇಧಾವಿಗಳ ಸಮಾವೇಶ ಆಯೋಜಿಸಲಾಗಿದೆ.
ಇಂದು (ಏ.16) ಮಧ್ಯಾಹ್ನ 3.30ಕ್ಕೆ ಕಾರ್ಯಕ್ರಮ ನಡೆಯಲಿದೆ. ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ ಮುಖ್ಯ ವಕ್ತಾರರಾಗಿ ಭಾಗವಹಿಸಲಿದ್ದಾರೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕ, ಶಾಸಕ ಅಭಯ ಪಾಟೀಲ ಕೋರಿದ್ದಾರೆ.




