Kannada NewsKarnataka NewsLatest

ಶಾಸಕರ ಮನೆಯೆದುರು ಆತ್ಮಹತ್ಯೆಗೆ ಯತ್ನಿಸಿದ ರೈತ

ಪ್ರಗತಿವಾಹಿನಿ ಸುದ್ದಿ, ದಾವಣಗೆರೆ: ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ ನಿವಾಸದ ಎದುರು ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 

ಮಂಗಳವಾರ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಯತ್ನಿಸಿದ ರೈತನನ್ನು ಹೊನ್ನಾಳಿ ತಾಲೂಕಿನ ಮಾದೇನಹಳ್ಳಿ ಗ್ರಾಮದ ರೈತ ಪರಮೇಶ್ವರಪ್ಪ ಎಂದು ಗುರುತಿಸಲಾಗಿದೆ. ಪರಮೇಶ್ವರಪ್ಪ ಅವರು ಕಳೆದ ಹಲವು ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದ ಜಮೀನನ್ನು ಬೇರೊಬ್ಬರು ಅತಿಕ್ರಮಿಸಿ ತಾವು ಬೆಳೆದ ತಾಳೆ ತೋಟವನ್ನು ನಾಶಪಡಿಸಿದ್ದು, ಈ ಕುರಿತು ಪೊಲೀಸ್‌ ಠಾಣೆಗೆ ದೂರು ನೀಡಿದರೂ ನ್ಯಾಯ ಒದಗಿಸಿಕೊಟ್ಟಿಲ್ಲ ಎಂಬ ಕಾರಣಕ್ಕೆ ಖಿನ್ನತೆಗೆ ಒಳಗಾಗಿ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.

Home add -Advt

ಶಾಸಕರ ನಿವಾಸದ ಬಳಿ ಬಂದು ತಮಗೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸುತ್ತ ವಿಷ ಸೇವಿಸಿದರು. ಗಾಬರಿಗೊಂಡ ಸ್ಥಳದಲ್ಲಿದ್ದವರು ಪರಮೇಶ್ವರಪ್ಪ ಅವರಿಗೆ ತಕ್ಷಣ ಹೊನ್ನಾಳಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ.

Related Articles

Back to top button