Kannada NewsKarnataka NewsLatestPolitics
*ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಹೃದಯಾಘತದಿಂದ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ರಾಜ ವೆಂಕಟಪ್ಪ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ್ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.
ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಾಜಾ ವೆಂಕಟಪ್ಪ ನಾಯಕ್, ಕಾಂಗ್ರೆಸ್ ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದರು.




