Belagavi NewsBelgaum NewsKarnataka NewsLatestSports
*ಕ್ರಿಕೆಟ್ ಪಂದ್ಯಾವಳಿಗೆ ಮೃಣಾಲ್ ಹೆಬ್ಬಾಳಕರ್ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜಗರಣಿ ಗ್ರಾಮದಲ್ಲಿ ರಾಯಲ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಆಯೋಜಿಸಲಾಗಿರುವ ಭವ್ಯ ಕ್ರಿಕೆಟ್ ಪಂದ್ಯಾವಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಅದ್ಧೂರಿಯಾಗಿ ಚಾಲನೆ ನೀಡಿದರು.

ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ಈ ಪಂದ್ಯಾವಳಿಯ ವಿಜೇತರಿಗೆ ಆಕರ್ಷಕ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಪ್ರಾಯೋಜಿಸಲಾಗಿದೆ. ದೈಹಿಕ ಮತ್ತು ಮಾನಸಿಕ ಎರಡೂ ಆರೋಗ್ಯಕ್ಕೆ ಕ್ರೀಡೆ ಅಗತ್ಯ. ಯುವಕರು ಸ್ಕ್ರೀನ್ ನಿಂದ ಆಚೆ ಬಂದು ಮೈದಾನಕ್ಕಿಳಿಯಬೇಕು ಎಂದು ಮೃಣಾಲ ಹೆಬ್ಬಾಳಕರ್ ಹೇಳಿದರು.
ಕ್ರೀಡಾಪಟುಗಳು, ಕ್ರಿಕೆಟ್ ಪ್ರೇಮಿಗಳು, ಗ್ರಾಮಸ್ಥರು ದೊಡ್ಡ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.




