Belagavi NewsBelgaum NewsKannada NewsKarnataka NewsLatest

*ನಕಲಿ ಫೇಸ್ ಬುಕ್ ಖಾತೆ ತೆರೆದು ಸತೀಶ್‌ ಜಾರಕಿಹೊಳಿ ವಿರುದ್ಧ ಪೋಸ್ಟ್: ಸೈಬರ್ ಕ್ರೈಂ ಗೆ ದೂರು ನೀಡಿದ ತಳವಾರ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ʻಕರುನಾಡ ಕುರುಬಗೌಡ್ರು ಹಾಗೂ ಬಂಡಾಯ ಧ್ವನಿʼ ಎಂಬ ನಕಲಿ ಫೇಸ್ ಬುಕ್ ಖಾತೆಯಲ್ಲಿ ಸತೀಶ್‌ ಜಾರಕಿಹೊಳಿ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ ಘಟನೆ ನಡೆದಿದ್ದು, ಈ ಕುರಿತು ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ಎಂಬುವರು ಬೆಳಗಾವಿ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.


ʻಕರುನಾಡ ಕುರುಬಗೌಡ್ರು ಹಾಗೂ ಬಂಡಾಯ ಧ್ವನಿʼ ಎಂಬ ನಕಲಿ ಫೇಸ್ ಬುಕ್ ಖಾತೆಯಲ್ಲಿ “ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ವಿರುದ್ದ 37 ಶಾಸಕರಿಂದ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಸಹಿ ಸಂಗ್ರಹ ಮಾಡಲಾಗಿದೆ” ಎಂಬ ಗಂಭೀರ ಆರೋಪ ಮಾಡಲಾಗಿದೆ. ಆದರೆ ಈ ಆರೋಪವನ್ನು ಸ್ವತಃ ಮಾಜಿ ಸಚಿವ ಸತೀಶ್ ಜಾರಕಿಹೊಳಿ ನಿರಾಕರಿಸಿದ್ದಾರೆ. ಹೀಗಾಗಿ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಇಲ್ಲಸಲ್ಲದ ಅಪವಾದ ಹೊರಿಸಿ ಅವರ ಹೆಸರು ಹಾಳು ಮಾಡಲು ನಕಲಿ ಫೇಸ್ ಬುಕ್ ಖಾತೆಯಲ್ಲಿ ಸಂಚು ರೂಪಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Home add -Advt


ಇದರಲ್ಲಿ ಮುಖ್ಯವಾಗಿ ಕುರುಬ ಜನಾಂಗ ಮತ್ತು ವಾಲ್ಮೀಕಿ ಜನಾಂಗದ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ಸಾರ್ವಜನಿಕರಲ್ಲಿ ಶಾಂತಿಭಂಗ ಮತ್ತು ದೊಂಬಿ ಉಂಟು ಮಾಡುವಂತೆ ಮಾಡಲು ಸುಳ್ಳು, ಸುದ್ದಿಗಳನ್ನು ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. ಶೀಘ್ರವೇ ಸುಳ್ಳು ಸುದ್ದಿ ಹರಡಿಸುವವರ ಹಾಗೂ ಈ ಎರಡು ನಕಲಿ ಫೇಸ್ ಬುಕ್ ಮಾಡಿ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೈಬರ್ ಕ್ರೈಂ ಠಾಣೆಗೆ ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ದೂರು ನೀಡಿದ್ದಾರೆ.

Related Articles

Back to top button