Kannada NewsKarnataka NewsLatestUncategorized
*26 ವರ್ಷದ ಕಾನ್ಸ್ ಟೇಬಲ್ ಆತ್ಮಹತ್ಯೆ; ಕಾರಣವೇನು?*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಬೆಂಡಿಗೇರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ 26 ವರ್ಷದ ಮಲ್ಲಿಕಾರ್ಜುನ ಆತ್ಮಹತ್ಯೆ ಮಾಡಿಕೊಂಡವರು. ದೊಡ್ಮನಿ ಕಾಲೊನಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೇವಲ 26 ವರ್ಷ ವಯಸ್ಸಿನ ಮಲ್ಲಿಕಾರ್ಜುನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.




